ಬೆಂಗಳೂರು : ಶ್ರೀರಾಮಸೇನೆ, ಭಜರಂಗ ದಳ, ಆರ್‌ಎಸ್‌ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ವಿರೋಧ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆಮೇಲೆ ಬುಲ್ ಡೋಜರ್ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು, ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಭಜರಂಗ ದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು” ಎಂದಷ್ಟೇ ನಾನು ಹೇಳಿದ್ದು. ಇದನ್ನು ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜ ವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ.


ಇದನ್ನೂ ಓದಿ : ಕಾಂಗ್ರೆಸ್ ಬೆಂಬಲಿಸುವ ಮತಾಂಧ ಶಕ್ತಿಗಳಿಂದಲೇ ಬಿಜೆಪಿ ಕಾರ್ಯಕರ್ತನ ಹತ್ಯೆ: ಬಿಜೆಪಿ ಆರೋಪ


ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ-ನುಡಿಗಳನ್ನು ನಿಲ್ಲಿಸದೆ ಹೋದರೆ ಅಂತಹವರ ವಿರುದ್ದ ಕಾನೂನುಕ್ರಮಕ್ಕಾಗಿ  ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.