Siddaramaiah : 'ಮುಂದಿನ ಚುನಾವಣೆಯೇ ಕೊನೆ, ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ'

ಹೀಗಾಗಿ ಹಲವು ಕ್ಷೇತ್ರಗಳ ಜನ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಎಲ್ಲ ಕ್ಷೇತ್ರಗಳೂ ಪ್ರಯಾರಿಟಿ, ಹೆಚ್ಚು- ಕಮ್ಮಿ ಅಂತ ಇಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

Written by - Channabasava A Kashinakunti | Last Updated : Mar 25, 2022, 01:49 PM IST
  • ಎಲ್ಲಿ ನನಗೆ ರಾಜಕೀಯ ಪುನರ್ ಜನ್ಮ ಸಿಕ್ತೋ ಅಲ್ಲಿಯೇ ಸೋಲಿಸಿದ್ರು
  • ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ
  • ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ
Siddaramaiah : 'ಮುಂದಿನ ಚುನಾವಣೆಯೇ ಕೊನೆ, ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ' title=

ಮೈಸೂರು : ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ,  ಬಾದಾಮಿ, ಕೋಲಾರ ಇಷ್ಟು ಕ್ಷೇತ್ರದ ಜನ ಕೇಳುತ್ತಿದ್ದಾರೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ತೀರ್ಮಾನ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ(Siddaramaiah), ಎಲ್ಲಿ ನನಗೆ ರಾಜಕೀಯ ಪುನರ್ ಜನ್ಮ ಸಿಕ್ತೋ ಅಲ್ಲಿಯೇ ಸೋಲಿಸಿದ್ರು. ಹಾಗಂತ ಬೇಸರ ಮಾಡಿಕೊಳ್ಳೋಕೆ ಆಗಲ್ಲ.ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಯಾವಾಗಲೂ ಮರೆಯಲ್ಲ. ಮುಂದಿನ ಚುನಾವಣೆಯೇ ಕೊನೆ, ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಹೀಗಾಗಿ ಹಲವು ಕ್ಷೇತ್ರಗಳ ಜನ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಎಲ್ಲ ಕ್ಷೇತ್ರಗಳೂ ಪ್ರಯಾರಿಟಿ, ಹೆಚ್ಚು- ಕಮ್ಮಿ ಅಂತ ಇಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯನವರ ರಾಜಕೀಯ ನಿಂತಿರುವುದೇ ಸುಳ್ಳುಗಳ ಮೇಲೆ: ಬಿಜೆಪಿ ಟೀಕೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News