Heavy Rainfall in Karnataka : ಇಂದು ನಾಳೆ ರಾಜ್ಯದ 9 ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್', ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ!

ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಹಾಗಾಗಿ ಆಗಸ್ಟ್ 28 ಮತ್ತು 29 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಆಗಸ್ಟ್ 27 ಮತ್ತು 30 ರಂದು ಜಿಲ್ಲೆಗಳಲ್ಲಿ 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ.

Written by - Channabasava A Kashinakunti | Last Updated : Aug 28, 2021, 11:02 AM IST
  • ಆ. 28 ಮತ್ತು 29 ರಂದು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
  • ಆಗಸ್ಟ್ 27 ಮತ್ತು 30 ರಂದು ಜಿಲ್ಲೆಗಳಲ್ಲಿ 'ಯಲ್ಲೋ ಅಲರ್ಟ್'
  • ಬೆಂಗಳೂರಿನಲ್ಲಿ ಇಂದು ನಾಳೆ ಗುಡುಗು ಸಹಿತ ಭಾರೀ ಮಳೆ
Heavy Rainfall in Karnataka : ಇಂದು ನಾಳೆ ರಾಜ್ಯದ 9 ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್', ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ! title=

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (IMD) ಆಗಸ್ಟ್ 28 ಮತ್ತು 29 ರಂದು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. 

ಒಂಬತ್ತು ಜಿಲ್ಲೆಗಳೆಂದರೆ: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳು. ಬೆಂಗಳೂರಿನಲ್ಲಿ ಐಎಂಡಿ(Indian Meteorological Department) ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಹಾಗಾಗಿ ಆಗಸ್ಟ್ 28 ಮತ್ತು 29 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಆಗಸ್ಟ್ 27 ಮತ್ತು 30 ರಂದು ಜಿಲ್ಲೆಗಳಲ್ಲಿ 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ.

ಇದನ್ನೂ ಓದಿ : Farmers Income : ರಾಜ್ಯ ಸರ್ಕಾರವು 2023-24 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ; ವಿವರಗಳು ಇಲ್ಲಿದೆ ನೋಡಿ

ಬೆಂಗಳೂರಿನಲ್ಲಿ ಇಂದು ನಾಳೆ ಗುಡುಗು ಸಹಿತ ಭಾರೀ ಮಳೆ(Rainfall)ಯಾಗಲಿದೆ. ಇಲ್ಲಿ ಮೋಡ ಕವಿದ ವಾತಾವರಣ ವಿದ್ದು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇದೆ. ಬೆಂಗಳೂರಿನಲ್ಲಿ ಆಗಸ್ಟ್ 27 ಶುಕ್ರವಾರ ಗುಡುಗು ಸಹಿತ  ಭಾರೀ ಮಳೆಯಾಗಿದೆ.

ಈ ಕುರಿತು ಮಾಹಿತಿ ನೀಡಿದ ಐಎಂಡಿ ಬೆಂಗಳೂರಿನ ನಿರ್ದೇಶಕರಾದ ಸಿಎಮ್ ಪಾಟೀಲ್, ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಿದೆ, ಮತ್ತು ಉತ್ತರ ಒಳಭಾಗ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಭಾರೀ ಮಳೆ(Heavy Rainfall)ಯಾಗಿದೆ ಎಂದು ಹೇಳಿದರು. "ಕರ್ನಾಟಕ ಸಮುದ್ರ ತೀರದಿಂದ ಕೇರಳ ಕರಾವಳಿಯವರೆಗೆ ಸಾಗುವ ಸಮುದ್ರ ತೀರದಲ್ಲಿ ಒಂದು ಕಡಲತೀರದ ತೊಟ್ಟಿ ಇದೆ. ಈ ಕಾರಣದಿಂದಾಗಿ, ಕರಾವಳಿ ಕರ್ನಾಟಕವು ಆಗಸ್ಟ್ 27 ರಿಂದ ಆಗಸ್ಟ್ 30 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳಾಂಗಣ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕವು ಆಗಸ್ಟ್ 27 ರಿಂದ 29 ರವರೆಗೆ ವ್ಯಾಪಕ ಮಳೆಯಾಗುತ್ತದೆ ಮತ್ತು ಆಗಸ್ಟ್ 30 ಮತ್ತು 31 ರಂದು ಸಾಕಷ್ಟು ವ್ಯಾಪಕ ಮಳೆಯಾಗಿದೆ ಎಂದು ಹೇಳಿದರು. "ದಕ್ಷಿಣ ಒಳನಾಡಿನ ಭಾಗದ ಮೇಲೆ ಮುಂಗಾರು ಸಕ್ರಿಯವಾಗಿದೆ. ಕೋಲಾರ ಜಿಲ್ಲೆಯಲ್ಲಿ ಕೆಜಿಎಫ್ ಮತ್ತು ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ತಲಾ 5 ಸೆಂಮೀ ಮಳೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Karnataka School Reopening : 'ರಾಜ್ಯದಲ್ಲಿ 1 ರಿಂದ 8 ನೇ ತರಗತಿಗಳ ಶಾಲೆ ಪುನರಾರಂಭ ಬಗ್ಗೆ ಆ.30 ರಂದು ತೀರ್ಮಾನ'

ಆಗಸ್ಟ್ 27 ರಂದು ಕರಾವಳಿ ಕರ್ನಾಟಕ(Coastal Karnataka)ದ ಭಾಗದ ಬಹುತೇಕ ಸ್ಥಳಗಳಲ್ಲಿ ಮತ್ತು ಆಂತರಿಕ ಕರ್ನಾಟಕದ ಹಲವೆಡೆ ಮಳೆಯಾಗಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ಐಎಂಡಿ(IMD) ತಿಳಿಸಿದೆ. ಆಗಸ್ಟ್ 27 ರಿಂದ 30 ರವರೆಗೆ ಮೀನುಗಾರರು ಈ ಸಮುದ್ರ ಪ್ರದೇಶಗಳಿಗೆ ಇಳಿಯದಂತೆ ಸೂಚಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News