ಮತ್ತೆ 3 ದಿನ ಪೀಣ್ಯ ಫ್ಲೈ ಓವರ್ ಕ್ಲೋಸ್: ಬದಲಿ ವ್ಯವಸ್ಥೆ ಏನೂ..?

ರಾಜ್ಯ ರಾಜಧಾನಿ ಬೆಂಗಳೂರಿಂದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್ ಮತ್ತೆ 3 ದಿನ ಕ್ಲೋಸ್  ಆಗಲಿದೆ. ಹೀಗಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ  ಸಾಧ್ಯತೆ ಇದೆ.

Written by - VISHWANATH HARIHARA | Edited by - Manjunath N | Last Updated : Jan 9, 2024, 06:24 PM IST
  • ಪೀಣ್ಯ ಎಲಿವೇಟೆಡ್ ಪ್ಲೈಓವರ್ ಬಂದ್ ಹಿನ್ನೆಲೆ ತುಮಕೂರು ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.
  • ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ, ಎಸ್ಆರ್ ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹದು.
  • ನೆಲಮಂಗಲ ಕಡೆ ಸಂಚರಿಸುವ ವಾಹನಗಳು ಹೆದ್ದಾರಿ ಸರ್ವೀಸ್ ರಸ್ತೆ ಮೂಲಕ ಪೀಣ್ಯ ಪೊಲೀಸ್ ಠಾಣೆ, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಮೂಲಕ ಸಂಚರಿಸಲು ಸಂಚಾರ ಪೊಲೀಸರಿಂದ ಸೂಚನೆ ನೀಡಲಾಗಿದೆ.
ಮತ್ತೆ 3 ದಿನ ಪೀಣ್ಯ ಫ್ಲೈ ಓವರ್ ಕ್ಲೋಸ್: ಬದಲಿ ವ್ಯವಸ್ಥೆ ಏನೂ..? title=

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಂದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್ ಮತ್ತೆ 3 ದಿನ ಕ್ಲೋಸ್  ಆಗಲಿದೆ. ಹೀಗಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ  ಸಾಧ್ಯತೆ ಇದೆ.

ಜನವರಿ 16ರ ರಾತ್ರಿ 11 ಗಂಟೆಯಿಂದ ಜ.19ರ ಬೆಳಗ್ಗೆ 11 ಗಂಟೆಯವರೆಗೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ಹಿನ್ನೆಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪೀಣ್ಯ ಮೇಲ್ಸೇತುವೆ ಮೇಲೆ ವಾಹನ ಸಂಚಾರವನ್ನು ನಾಲ್ಕು ದಿನಗಳ ಕಾಲ ನಿರ್ಬಂಧಿಸಿದೆ. ಒಟ್ಟು ನಾಲ್ಕು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಆಗುವುದರಿಂದ ಸರ್ವಿಸ್ ರಸ್ತೆ ಬಳಸಬೇಕಾಗಿದೆ.

ಇದನ್ನೂ ಓದಿ- ಕಾಂಗ್ರೆಸ್‌ನವರು ನಿಜವಾದ ಹಿಂದುಗಳು- ಸಚಿವ ರಾಮಲಿಂಗರೆಡ್ಡಿ

2022ರಲ್ಲಿ ಪೀಣ್ಯ ಫ್ಲೈಓವರ್‌ನ ಎರಡು ಪಿಲ್ಲರ್‌ ಗಳ ಕೇಬಲ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು. ಈಗ ಮತ್ತೆ ಲೋಡ್ ಟೆಸ್ಟಿಂಗ್ ಹಿನ್ನೆಲೆ ಫ್ಲೈ ಓವರ್ ಬಂದ್ ಆಗಲಿದ್ದು, ವಾಹನ ಸವಾರರಿಗೆ ದೊಡ್ಡ ತಲೆನೋವಾಗಲಿದೆ. ಈ ಬಗ್ಗೆ ಮಾತನಾಡಿರುವ ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಸ್ಟಿಂಗ್ ನಡೆಸಲಿದೆ. ಹೀಗಾಗಿ ವಾಹನ ಸವಾರರು ಬದಲಿ ಮಾರ್ಗದಲ್ಲಿ ಚಲಿಸಿ ಸಹಕರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ- ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಬದಲಿ ಮಾರ್ಗ ಇಂತಿದೆ

ಪೀಣ್ಯ ಎಲಿವೇಟೆಡ್ ಪ್ಲೈಓವರ್ ಬಂದ್ ಹಿನ್ನೆಲೆ ತುಮಕೂರು ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.ನೆಲಮಂಗಲ ಕಡೆಯಿಂದ ಬರುವ ವಾಹನಗಳು ಕೆನ್ನಮೆಟಲ್ ಬಳಿ ಹೆದ್ದಾರಿ ಸರ್ವೀಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ, ಎಸ್ಆರ್ ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹದು.ನೆಲಮಂಗಲ ಕಡೆ ಸಂಚರಿಸುವ ವಾಹನಗಳು ಹೆದ್ದಾರಿ ಸರ್ವೀಸ್ ರಸ್ತೆ ಮೂಲಕ ಪೀಣ್ಯ ಪೊಲೀಸ್ ಠಾಣೆ, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಮೂಲಕ ಸಂಚರಿಸಲು ಸಂಚಾರ ಪೊಲೀಸರಿಂದ ಸೂಚನೆ ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News