'ಕಂಡಲ್ಲಿ ಗುಂಡಿಕ್ಕುವ' ಆತಂಕದಲ್ಲಿ ಜನತೆ ಕಂಗಾಲಾಗಿದ್ದಾರೆ; ಹೆಚ್‌ಡಿಕೆ

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಕೇಂದ್ರ-ರಾಜ್ಯ ಸರ್ಕಾರಗಳು ಪ್ರತಿಭಟನೆಗೆ ನಿರ್ಬಂಧ  ಹೇರ ತೊಡಗಿರುವುದು ತುರ್ತುಪರಿಸ್ಥಿತಿಯ ಮುನ್ಸೂಚನೆ ಎಂಬಂತಿದೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Last Updated : Dec 20, 2019, 10:59 AM IST
 'ಕಂಡಲ್ಲಿ ಗುಂಡಿಕ್ಕುವ' ಆತಂಕದಲ್ಲಿ ಜನತೆ ಕಂಗಾಲಾಗಿದ್ದಾರೆ; ಹೆಚ್‌ಡಿಕೆ  title=

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ಭುಗಿಲೇಳುತ್ತಿದ್ದು,  ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ. ರಾಜ್ಯದ ಮಂಗಳೂರು, ಕಲ್ಬುರ್ಗಿ  ಸೇರಿದಂತೆ ದೇಶದ ಹಲವೆಡೆ 'ಕಂಡಲ್ಲಿ ಗುಂಡಿಕ್ಕುವ' ಆತಂಕದಲ್ಲಿ ಜನತೆ ಕಂಗಾಲಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಬೇಸರ ವ್ಯಕ್ತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ(CAA) ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದ್ದು, ದಮನಕಾರಿ ನೀತಿಯನ್ನು ಅನುಸರಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ನಿಷೇಧಾಜ್ಞೆ, ಕರ್ಫ್ಯೂ  ಹೇರುವ ಮೂಲಕ  ಸಮಾಜದಲ್ಲಿ ಆತಂಕದ ವಾತಾವರಣ  ಸೃಷ್ಟಿಸಲಾಗುತ್ತಿದೆ ಎಂದು ಹೇಳಿದ ಕುಮಾರಸ್ವಾಮಿ, ಜನಸಾಮಾನ್ಯರು ಭಯ ಭೀತಿಯ ವಾತಾವರಣದಲ್ಲಿ  ಬದುಕುವಂತಾಗಿದೆ. ರಾಜ್ಯದ ಮಂಗಳೂರು, ಕಲ್ಬುರ್ಗಿ  ಸೇರಿದಂತೆ ದೇಶದ ಹಲವೆಡೆ 'ಕಂಡಲ್ಲಿ ಗುಂಡಿಕ್ಕುವ' ಆತಂಕದಲ್ಲಿ ಜನತೆ ಕಂಗಾಲಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಹಿಂಸಾತ್ಮಕ ಪ್ರತಿಭಟನೆ  ಜನರ ಅಸ್ತ್ರ.. ಶಾಂತಿಯುತ ಪ್ರತಿಭಟನೆಯನ್ನೂ ಅರಗಿಸಿಕೊಳ್ಳಲಾಗದ ಕೇಂದ್ರ-ರಾಜ್ಯ ಸರ್ಕಾರಗಳು  ಪೊಲೀಸ್ ಬಲಪ್ರಯೋಗದ ಮೂಲಕ ಸಮಾಜದಲ್ಲಿ ಪ್ರಕ್ಷುಬ್ಧ ವಾತಾವರಣವನ್ನು ನಿರ್ಮಿಸತೊಡಗಿರುವುದು ದೊಡ್ಡ ದುರಂತ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೆಚ್‌ಡಿಕೆ ಅಕ್ರೋಶ ವ್ಯಕ್ತಪಡಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಕೇಂದ್ರ-ರಾಜ್ಯ ಸರ್ಕಾರಗಳು ಪ್ರತಿಭಟನೆಗೆ ನಿರ್ಬಂಧ  ಹೇರ ತೊಡಗಿರುವುದು ತುರ್ತುಪರಿಸ್ಥಿತಿಯ ಮುನ್ಸೂಚನೆ ಎಂಬಂತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

Trending News