ಮಂಡ್ಯ: ಮಂಡ್ಯದ ಜನತೆ ಎಂದಿಗೂ ನನ್ನ ಕೈಬಿಡುವುದಿಲ್ಲ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದ ಜನತೆ ಎಂದಿಗೂ ನನ್ನ ಕೈಬಿಡುವುದಿಲ್ಲ ಎಂದಿದ್ದಾರೆ.


ಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ; ಅಧಿಕೃತ ಘೋಷಣೆ


ನನ್ನನ್ನು ಸೋಲಿಸಲು ಕೆಲ ಶಕ್ತಿಗಳಿಂದ ಹುನ್ನಾರ ನಡೆಯುತ್ತಿದೆ. ಆದರೆ, ಜನರು ನನ್ನ ಪರವಾಗಿ ಇದ್ದಾರೆ. ಮಂಡ್ಯದ ಜನತೆ ಎಂದಿಗೂ ನನ್ನ ಕೈಬಿಡುವುದಿಲ್ಲ. ನಮ್ಮ ತಂದೆ ಕುಮಾರಸ್ವಾಮಿ ಅವರು ಮಾಡಿರುವ ಅಭಿವೃದ್ಧಿ ಕೆಲಸ ನನ್ನ ಕೈ ಹಿಡಿಯಲಿದೆ. ನನ್ನನ್ನು ಸೋಲಿಸಲು ನಿಂತಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದಿರುವ ನಿಖಿಲ್ ಕುಮಾರಸ್ವಾಮಿ ಅವರು, ಸುಮಲತಾ ಅವರಿಗೆ ಬೆಂಬಲ ನೀಡಿರುವುದರಿಂದ ನನಗೆ ಯಾವುದೇ ರೀತಿಯಲ್ಲೂ ಹಿನ್ನಡೆಯಾಗಲ್ಲ ಎಂದು ಹೇಳಿದ್ದಾರೆ.