ಸೇವಾ ನ್ಯೂನ್ಯತೆ ಎಸಗಿದ ಪಿ.ಎಫ್ ಇಲಾಖೆಗೆ 6 ಲಕ್ಷ ಕ್ಕೂ ಅಧಿಕ  ದಂಡ ವಿಧಿಸಿ ಗ್ರಾಹಕರ ಆಯೋಗ ಆದೇಶ

  6 ಜನ ನಿವೃತ್ತ ಪಿಂಚಣಿದಾರರು ಹುಬ್ಬಳ್ಳಿಯ ಪ್ರಾವಿಡೆಂಟ್ ಫಂಡ್ ಇಲಾಖೆಯವರು ತಮ್ಮ ನಿವೃತ್ತಿ ನಂತರದ ಪಿಂಚಣಿ ನಿಗದಿಪಡಿಸುವಾಗ ತಷ್ಟು ಲೆಕ್ಕ ಹಾಕಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರುಗಳನ್ನು ಸಲ್ಲಿಸಿದ್ದರು.

Written by - Manjunath N | Last Updated : Sep 13, 2023, 05:42 PM IST
  • ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಆಯೋಗ ಅಭಿಪ್ರಾಯಪಟ್ಟು ಪಿ.ಎಫ್. ಇಲಾಖೆಯವರ ವಾದವನ್ನು ತಳ್ಳಿಹಾಕಿದೆ
  • ಒಟ್ಟು ರೂ.6 ಲಕ್ಷ 42 ಸಾವಿರ 68 ರೂಪಾಯಿ ಬಾಕಿ ಹಣ ಮತ್ತು ಅದರ ಮೇಲೆ ಶೇ.10 ರಂತೆ ಬಡ್ಡಿ ಲೆಕ್ಕ ಹಾಕಿ ನೀಡುವಂತೆ ಆದೇಶಿಸಿದೆ.
ಸೇವಾ ನ್ಯೂನ್ಯತೆ ಎಸಗಿದ ಪಿ.ಎಫ್ ಇಲಾಖೆಗೆ 6 ಲಕ್ಷ ಕ್ಕೂ ಅಧಿಕ  ದಂಡ ವಿಧಿಸಿ ಗ್ರಾಹಕರ ಆಯೋಗ ಆದೇಶ  title=

ಧಾರವಾಡ:  6 ಜನ ನಿವೃತ್ತ ಪಿಂಚಣಿದಾರರು ಹುಬ್ಬಳ್ಳಿಯ ಪ್ರಾವಿಡೆಂಟ್ ಫಂಡ್ ಇಲಾಖೆಯವರು ತಮ್ಮ ನಿವೃತ್ತಿ ನಂತರದ ಪಿಂಚಣಿ ನಿಗದಿಪಡಿಸುವಾಗ ತಷ್ಟು ಲೆಕ್ಕ ಹಾಕಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರುಗಳನ್ನು ಸಲ್ಲಿಸಿದ್ದರು.

ಸದರಿ ದೂರುಗಳ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ.ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ ಆ. ಬೋಳಶೆಟ್ಟಿ ಮತ್ತು ಪಿ.ಸಿ ಹಿರೇಮಠ ಅವರು ತಮಗೆ ಸಂಬಂಧಿಸಿದ ಪಿಂಚಣಿ ವ್ಯಾಜ್ಯವನ್ನು ಪಿ.ಎಫ್ ಇಲಾಖೆಯಿಂದ ಪ್ರತಿ ತಿಂಗಳು ನಡೆಸುವ ಪಿಂಚಣಿ ಲೋಕ್ ಅದಾಲತ್ ನಲ್ಲಿ ದೂರುದಾರ ಭಾಗವಹಿಸಿ ಪರಿಹಾರ ಕಂಡುಕೊಳ್ಳದೇ ಅನಗತ್ಯವಾಗಿ ಗ್ರಾಹಕರ ಆಯೋಗಕ್ಕೆ ದೂರುಗಳನ್ನು ಸಲ್ಲಿಸಿದ್ದು ತಪ್ಪು ಅಂತಾ ಹೇಳಿ ಅವುಗಳನ್ನು ವಜಾಗೊಳಿಸಬೇಕು ಎಂದು ಪಿ.ಎಫ್. ಇಲಾಖೆಯವರು ಆಕ್ಷೇಪಿಸಿದ್ದರು.

ಇದನ್ನೂ ಓದಿ : 60 ಲಕ್ಷ‌ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ : ಸಚಿವೆ ಲಕ್ಷ್ಮೀ ಹಬ್ಬಾಳ್ಕರ್ ಮಾಹಿತಿ

ಎಲ್ಲ ದೂರುದಾರರ ಪಿಂಚಣಿ ನಿಗದಿಪಡಿಸುವಾಗ ಪಿ.ಎಫ್. ಇಲಾಖೆ ಸರಿಯಾಗಿ ಲೆಕ್ಕ ಹಾಕದೇ ತಪ್ಪೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅವರು ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಆಯೋಗ ಅಭಿಪ್ರಾಯಪಟ್ಟು ಪಿ.ಎಫ್. ಇಲಾಖೆಯವರ ವಾದವನ್ನು ತಳ್ಳಿಹಾಕಿದೆ. ದೂರುದಾರರಿಗೆ ಅವರ ಪಿಂಚಣಿ ನಿಗದಿಪಡಿಸಿದ ದಿನಾಂಕದಿಂದ ಆಯೋಗ ಆದೇಶ ಹೊರಡಿಸಿದ ದಿನಾಂಕದವರೆಗೆ 6 ಜನ ದೂರುದಾರರಿಗೆ ಒಟ್ಟು ರೂ.6 ಲಕ್ಷ 42 ಸಾವಿರ 68 ರೂಪಾಯಿ ಬಾಕಿ ಹಣ ಮತ್ತು ಅದರ ಮೇಲೆ ಶೇ.10 ರಂತೆ ಬಡ್ಡಿ ಲೆಕ್ಕ ಹಾಕಿ ನೀಡುವಂತೆ ಆದೇಶಿಸಿದೆ.

ಇದನ್ನೂ ಓದಿ : ಪಟಾಪಟಿ ಚಡ್ಡಿ ಧರಿಸಿ, ಖಾಲಿ ಕೊಡ ಹಿಡಿದು ಪ್ರತಿಭಟನೆ

ಜೊತೆಗೆ ಪ್ರತಿಯೊಬ್ಬ ದೂರುದಾರರಿಗೆ ಮಾನಸಿಕ ತೊಂದರೆಗಾಗಿ ತಲಾ ರೂ.20 ಸಾವಿರ ಪರಿಹಾರ ಹಾಗೂ ತಲಾ ರೂ.10 ಸಾವಿರ ಪ್ರಕರಣದ ಖರ್ಚು ವೆಚ್ಚವನ್ನು ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡಲು ಆಯೋಗ ಆದೇಶಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News