ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 01-04-2023ರಿಂದ ಬಾಕಿ ಇರುವ 14ನೇ ಕಂತಿನ ಸಹಾಯಧನ ಶೀಘ್ರದಲ್ಲಿಯೇ ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಇದೂವರೆಗೆ ಇ-ಕೆ.ವೈ.ಸಿ. ಮಾಡಿಸದ ರೈತರು ಯೋಜನೆಯ ಆರ್ಥಿಕ ಸೌಲಭ್ಯ ಪಡೆಯಲು ಕೂಡಲೆ ಇ.ಕೆ.ವೈ.ಸಿ. ಮಾಡಿಸಲು ಕೋರಿದೆ. ಇ.ಕೆ.ವೈ.ಸಿ. ಮಾಡಿಸಲು ಇದೇ ಜೂನ್ 30 ಕೊನೆ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಲೈಂಗಿಕತೆಗೆ ನಕಾರ ಹೇಳುವುದು ಕ್ರೌರ್ಯ, ಆದರೆ ಅಪರಾಧವಲ್ಲ, ಕರ್ನಾಟಕ ಹೈಕೋರ್ಟ್ ಆದೇಶ


ಒಂದು ವೇಳೆ ಇ.ಕೆ.ವೈ.ಸಿ. ಮಾಡಿಸದಿದ್ದಲ್ಲಿ ಕೇಂದ್ರ ಸರ್ಕಾರದಿಂದ ವಾರ್ಷಿಕವಾಗಿ ಸಿಗುವ 6,000 ರೂ. ಸಹಾಯಧನ ಸಿಗುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ 75,562 ರೈತರು ಪಿ.ಎಮ್. ಕಿಸಾನ್ ಯೋಜನೆಯಡಿ ಇ-ಕೆ.ವೈ.ಸಿ ಮಾಡಿಸಲು ಬಾಕಿ ಉಳಿದಿದ್ದು, ಕೂಡಲೆ ಇ.ಕೆ.ವೈ.ಸಿ. ಮಾಡಿಸುವಂತೆ ಅವರು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ


ರೈತ ಫಲಾನುಭವಿಗಳು ತಮ್ಮ ಆಧಾರ ಸಂಖ್ಯೆ ಹಾಗೂ ಆಧಾರ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಯೊAದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಓನ್ ಕೇಂದ್ರ, ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಓ.ಟಿ.ಪಿ ಮೂಲಕ ಇ-ಕೆ.ವೈ.ಸಿ. ಮಾಡಿಸಬಹುದು.


ಇದಲ್ಲದೆ ಹತ್ತಿರದ ಅಂಚೆ ಕಛೇರಿಗೆ ಭೇಟಿ ಮಾಡಿ ಪೋಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕ ಅಥವಾ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಪಿ.ಎಂ.-ಕಿಸಾನ್ ಮೋಬೈಲ್ ತಂತ್ರಾAಶವನ್ನು ಮೋಬೈಲ್‌ನ ಪ್ಲೇಸ್ಟೋರ್‌ನಿಂದ ಡೌನಲೋಡ್ ಮಾಡಿಕೊಂಡು ಸ್ವತ ಫಲಾನುಭವಿಗಳ ತಮ್ಮ ಮುಖ ಚಹರೆ ತೋರಿಸುವ ಮೂಲಕ ಇ-ಕೆ.ವೈ.ಸಿ. ಮಾಡಿಕೊಳ್ಳಬಹುದು. ಇನ್ನು ಅಕ್ಕಪಕ್ಕದ ರೈತರಿಗೆ ಇ.ಕೆ.ವೈ.ಸಿ. ಮಾಡಿಸಿಕೊಳ್ಳಲು ರೈತ ಬಾಂಧವರು ತಿಳಿಸಬೇಕು ಎಂದು ಅವರು ಕೋರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.