ಮಂಗಳೂರು : ಓಖಿ ಚಂಡಮಾರುತದಿಂದ ಸಂಭವಿಸಿರುವ ಹಾನಿ ವೀಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಪ್ರವಾಸ ಕೈಗೊಂಡಿದ್ದು, ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. 


COMMERCIAL BREAK
SCROLL TO CONTINUE READING

ಮೋದಿ ಅವರು ಕೇರಳ ಪ್ರವಾಸ ಮುಗಿಸಿ ನಾಳೆ ರಾತ್ರಿ 11.30 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು ಸರ್ಕ್ಯೂಟ್ ಹೌಸ್ ಅಥವಾ ಖಾಸಗಿ ಹೊಟೇಲ್ನಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆಯಿದೆ. 


ನಂತರ ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಪಕ್ಷದ ವತಿಯಿಂದ ಅವರನ್ನು ಸ್ವಾಗತಿಸಲಿದ್ದು, ಮಂಗಳೂರಿನಲ್ಲಿ ವಾಸ್ತವ್ಯ ಬಿಟ್ಟರೆ ಬೇರೆ ಯಾವುದೇ ಕಾರ್ಯಕ್ರಮಗಳಿಲ್ಲ ಎಂದು ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.