PM Narendra Modi Bandipur Visit: ಏಪ್ರಿಲ್ 09 ರಂದು  ಪ್ರಧಾನಿ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರರಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಖಾಕಿ ಅಲರ್ಟ್ ಆಗಿದ್ದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಬಂಡೀಪುರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ  181 ಮತ್ತು 766ರ ರಸ್ತೆಯಲ್ಲಿ  ತಮಿಳುನಾಡು ಕಡೆಗೆ ಹೋಗುವ ಮತ್ತು ಬರುವ ಎಲ್ಲಾ ಭಾರಿ ವಾಹನಗಳನ್ನು ಏಪ್ರಿಲ್ ೦7ರ ಸಂಜೆ 4 ಗಂಟೆಯಿಂದ ಏಪ್ರಿಲ್ 09ರ ಬೆಳಗ್ಗೆ 12 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.


ಇದನ್ನೂ ಓದಿ- ಎಎಪಿಗೆ ರಾಷ್ಟ್ರೀಯ ಸ್ಥಾನಮಾನ: ಏಪ್ರಿಲ್ 13 ರ ಮೊದಲು ಆದೇಶ ಹೊರಡಿಸಲು ಹೈಕೋರ್ಟ್ ಸೂಚನೆ


ಇದಲ್ಲದೆ, ಸರ್ಕಾರಿ ವಾಹನ ಸರ್ಕಾರಿ ಬಸ್ಸುಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಏಪ್ರಿಲ್ ೦8ರ ಸಂಜೆ 4 ಗಂಟೆಯಿಂದ ಏಪ್ರಿಲ್ ೦9ರ ಬೆಳಿಗ್ಗೆ 12 ಗಂಟೆಯವರೆಗೆ  ನಿರ್ಬಂಧಿಸಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್  ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ- ತಂದೆ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ವಿದ್ಯಾರ್ಥಿನಿ.!


ಇನ್ನು,  ರಕ್ಷಣಾ ಹಿತದೃಷ್ಠಿಯಿಂದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎಲ್ಲಾ ರೀತಿಯ ಡ್ರೋನ್ ಹಾರಾಟವನ್ನು  9ರವರೆಗೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.