ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಹಿಡಿದಿರುವ ಶನಿ:‌ ಮಾಜಿ ಸ್ಪೀಕರ್ ರಮೇಶ್‌ ಕುಮಾರ್

Lok sabha elections 2024: ಪ್ರಧಾನಿ ಮೋದಿ ಕಾಲದಲ್ಲಿ ದೇಶದ ಅಭಿವೃದ್ಧಿ ಶೂನ್ಯವಾಗಿದೆ. ಚರಿತ್ರೆಯಲ್ಲಿ ಅವರಂತೆ ಸುಳ್ಳು ಹೇಳಿದವರನ್ನು ನಾನು ನೋಡಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೆರಳಿಗೆ ಹೋಗಿ ಬದುಕಿ ಉದ್ದಾರ ಆದವರು ಯಾರೂ ಇಲ್ಲವೆಂದು ರಮೇಶ್‌ ಕುಮಾರ್‌ ಕಿಡಿಕಾರಿದ್ದಾರೆ.

Written by - Puttaraj K Alur | Last Updated : Apr 21, 2024, 06:43 PM IST
  • ಪ್ರಧಾನಿ ಬಗ್ಗೆ ಹಗುರ ಹೇಳಿಕೆ ನೀಡಿದ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌
  • ಪ್ರಧಾನಿ ನರೇಂದ್ರ ಮೋದಿ ಈ ದೇಶಕ್ಕೆ ಹಿಡಿದಿರುವ ಶನಿ ಎಂದು ಆಕ್ರೋಶ
  • ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ದೇಶದ ಅಭಿವೃದ್ಧಿ ಶೂನ್ಯವೆಂದು ಟೀಕೆ
ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಹಿಡಿದಿರುವ ಶನಿ:‌ ಮಾಜಿ ಸ್ಪೀಕರ್ ರಮೇಶ್‌ ಕುಮಾರ್ title=
ಪ್ರಧಾನಿ ಮೋದಿ ವಿರುದ್ಧ ರಮೇಶ್‌ ಕುಮಾರ್ ಆಕ್ರೋಶ!

ಕೋಲಾರ: ನರೇಂದ್ರ ಮೋದಿಯವರನ್ನು ಶನಿಗೆ ಹೋಲಿಸಿರುವ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಪ್ರಧಾನಿ ಬಗ್ಗೆ ಹಗುರ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿರುವ ಅವರು, ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಈ ದೇಶಕ್ಕೆ ಹಿಡಿದಿರುವ ಶನಿ, ಅದು ಬಿಟ್ಟು ಹೋಗಲಿ ಎಂದು ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಆ ಶನಿ ಇಂದಿರಾ ಗಾಂಧಿಯವರು ಕೂತಿದ್ದ ಸೀಟಲ್ಲಿ ಬಂದು ಕೂತುಬಿಟ್ಟಿದೆ. ಎಲ್ಲಾ ಜಾತಿ-ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬಿದ್ದರು ಇಂದಿರಾ ಗಾಂಧಿ. ಎಂತಹವರ ಜಾಗಕ್ಕೆ ಎಂತಹವರು ಬಂದು ಕೂತಿದ್ದಾರೆ. ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳೋದು ಕೇಳಿದ್ದೇವೆ. ಪ್ರಧಾನಿ ಸುಳ್ಳು ಹೇಳೋದು ಈ ಪ್ರಪಂಚದಲ್ಲಿಯೇ ಕೇಳಿರಲಿಲ್ಲವೆಂದು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿಯೇ ಕಿಡಿಕಾರಿದ್ದಾರೆ. 

ಇದನ್ನೂ ಓದಿ: ಕಾಂಗ್ರೆಸ್ ನವರು ರೈತರು, ವಿದ್ಯಾರ್ಥಿಗಳು, ದಲಿತರಿಗೆ ಚಂಬು ಕೊಟ್ಟಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ಕಾಲದಲ್ಲಿ ದೇಶದ ಅಭಿವೃದ್ಧಿ ಶೂನ್ಯವಾಗಿದೆ. ಚರಿತ್ರೆಯಲ್ಲಿ ಅವರಂತೆ ಸುಳ್ಳು ಹೇಳಿದವರನ್ನು ನಾನು ನೋಡಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೆರಳಿಗೆ ಹೋಗಿ ಬದುಕಿ ಉದ್ದಾರ ಆದವರು ಯಾರೂ ಇಲ್ಲ. ಚೆನ್ನಾಗಿ ಬದುಕಿದವರಿಗ ಏಕೆ ಈ ಗತಿ ಬಂತು ಅನ್ನೋದೇ ನನಗೆ ದುಃಖ. ಇರಲಿ ರೈತನ ಮಗ ಎಂದು ಪ್ರಧಾನಿ ಮಾಡಿದ್ದೇವು. ಆತನ ಮಗ ಮುಖ್ಯಮಂತ್ರಿಯಾಗಿದ್ದರು. ಇವರು ಸೇರಿದ್ದು ಬಿಜೆಪಿ ಜೊತೆಗೆ. ಒಬ್ಬ ಪ್ರಧಾನ ಮಂತ್ರಿ, ಒಬ್ಬ ಮುಖ್ಯಮಂತ್ರಿ ಕೇವಲ ೩ ಸೀಟುಗಳನ್ನು ತೆಗೆದುಕೊಂಡಿದ್ದಾರೆ. ಅದರಲ್ಲೂ ಒಂದು ಮಗನಿಗೆ ಇನ್ನೊಂದು ಮೊಮ್ಮಗನಿಗೆ ಅಂತಾ ರಮೇಶ್‌ ಕುಮಾರ್‌ ಟೀಕಿಸಿದ್ದಾರೆ. 

ಅಳಿಯ ಡಾ.ಸಿ.ಎನ್.ಮಂಜುನಾಥ್‌ಗೆ ನಿಮ್ಮ ಲೆಕ್ಕದಲ್ಲಿ ಟಿಕೆಟ್ ಕೊಡಿ ಎಂದು ಅಲ್ಲಿಗೆ ಕಳುಹಿಸಿದರು. ಇವರ ಹಣೆಬರಹಕ್ಕೆ ಅವರ ಹತ್ತಿರ ಹೋಗಿ ಸಲಾಂ ಹೊಡೆಯುತ್ತಿದ್ದಾರೆ ಎಂದು ದೇವೇಗೌಡರ ವಿರುದ್ಧ ರಮೇಶ್‌ ಕುಮಾರ್‌ ಕಿಡಿಕಾರಿದ್ದಾರೆ. 

ಇದನ್ನೂ ಓದಿ: ನಿರುದ್ಯೋಗಿ ಯುವಕರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ? ಸಿಎಂ ಸಿದ್ದರಾಮಯ್ಯ ಕಿಡಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News