)
CM Siddaramaiah: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಾಲೆಯೊಂದರ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ಕೀಟನಾಶಕ ಬೆರೆಸಿದ್ದು, ಅಡುಗೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಪ್ರತಿಕ್ರಯಿಸಿದ್ದು, ʼಭಯೋತ್ಪಾದಕ ಕೃತ್ಯಕ್ಕೆ ಸಮʼ ಎಂದು ಕಿಡಿಕಾರಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆʼ ಅಂತಾ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು…
— Siddaramaiah (@siddaramaiah) August 1, 2025
ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ ಎಂದು ಸಿಎಂ ಸಿದ್ದರಾಮಯ್ಯನವರು ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ ಧ್ವಜ ತಯಾರಿ ಘಟಕದಲ್ಲಿ ಕಾರ್ಮಿಕರ ಅಳಲು