ಬೆಂಗಳೂರು: ಚಿನ್ನದ ಚಮಚ ಬಾಯಲ್ಲಿಟ್ಟುಕೊಂಡು ಬೆಳೆದ ರಾಜಕೀಯ ನಿರುದ್ಯೋಗಿ ರಾಹುಲ್ ಗಾಂಧಿ ವೀರ ಸಾವರ್ಕರ್‌ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದವೆಂದು ಬಿಜೆಪಿ ಟೀಕಿಸಿದೆ.


COMMERCIAL BREAK
SCROLL TO CONTINUE READING

ಕ್ಷಮಾಪಣಾ ಪತ್ರ ಬರೆದು ಬ್ರಿಟಿಷರ ಅಡಿಯಾಳಾಗಿದ್ದ ವೀರ ಸಾವರ್ಕರ್ ವೀರನಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ‘ಕಠಿಣಾತಿ ಕಠಿಣ ಶಿಕ್ಷೆ ಎದುರಿಸಿದ ಸಾವರ್ಕರ್‌ ವೀರನಲ್ಲ ಎಂದಾದರೆ, ಅಪ್ರಬುದ್ಧ ನಡೆಗಳಿಂದ ನ್ಯಾಯಾಲಯದಿಂದ ಆಗಾಗ್ಗೆ ಛೀಮಾರಿ ಹಾಕಿಸಿಕೊಂಡು ಕ್ಷಮೆ ಕೇಳುವ ರಾಹುಲ್‌ ಗಾಂಧಿ ಏನು?’ ಎಂದು ಬಿಜೆಪಿ ಪ್ರಶ್ನಿಸಿದೆ.


ಇದನ್ನೂ ಓದಿ: ಮತದಾರರ ಜಾಗೃತಿ ಹೆಸರಲ್ಲಿ ಬಿಜೆಪಿಯಿಂದ ಡಾಟಾ ಕಳ್ಳತನ: ಕಾಂಗ್ರೆಸ್ ಗಂಭೀರ ಆರೋಪ


ಹಿಂದೂ ಪದ ಕುರಿತ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು!


ಇಂದಿರಾ ಗಾಂಧಿ ಅವರೇ ‘ಭಾರತದ ವೀರ ಸುಪುತ್ರ’ ಎಂದು ಸಂಬೋಧಿಸಿ #VeerSavarkar ಜನ್ಮಶತಮಾನೋತ್ಸವ ಆಚರಣೆಗೆ ಸಹಕರಿಸಿದ್ದರು. ಸಾವರ್ಕರ್‌ ಕುರಿತಾಗಿ ಅಂಚೆ ಚೀಟಿ ಬಿಡುಗಡೆ ಮಾಡಿ, ಸಾಕ್ಷ್ಯಚಿತ್ರ ನಿರ್ಮಿಸಲು ಆದೇಶ ನೀಡಿದ್ದರು. ಸಾವರ್ಕರ್ ಟ್ರಸ್ಟ್‌ಗೆ 11 ಸಾವಿರ ರೂ. ದೇಣಿಗೆ ಕೂಡ ನೀಡಿದ್ದರು’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.