ಹುಬ್ಬಳ್ಳಿ : ಕಾಂಗ್ರೆಸ್ ಸಂಸದರು ಒಬ್ಬೊಬ್ಬರೇ ದೇಶ ಒಡೆಯುವ ಮತ್ತು ದೇಶ ದ್ರೋಹಿ ಘೋಷಣೆ ಕೂಗುತ್ತಿದ್ದು, ರಾಹುಲ್ ಗಾಂಧಿ ಈ ಬಗ್ಗೆ ಏನು ಹೇಳುತ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ. ಲೋಕಸಭೆ ಅಧಿವೇಶನದ ವೇಳೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗೆಬ್ಬಿಸಿದ್ದರು. ಈಗ ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆದ್ದ ಮರು ಕ್ಷಣವೇ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಹಾಕಿದ್ದಾರೆ. ಇಂಥ ದೇಶ ದ್ರೋಹದ ಕೃತ್ಯಕ್ಕೆ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಏನು ಹೇಳುತ್ತಾರೆ? ಸಚಿವ ಜೋಶಿ ಪ್ರತ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಮುಸ್ಲಿಂ ಅಭ್ಯರ್ಥಿ ಗೆದ್ದಾಕ್ಷಣ ಕರ್ನಾಟಕ ವಿಧಾನಸೌಧ ಒಳಗಡೆ ಹೀಗೆ ಪಾಕಿಸ್ತಾನ್ ಜಿಂದಾಬಾದ್ ಎಂದು ಜೈಕಾರ ಘೋಷಣೆ ಕೂಗಿರುವುದು ಸಾಮಾನ್ಯ ಸಂಗತಿಯಲ್ಲ. ಇದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಜೋಶಿ  ಹೇಳಿದ್ದಾರೆ.


ಇದನ್ನೂ ಓದಿ : ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಂಧನಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ


ದೇಶ ದ್ರೋಹಕ್ಕೆ ಕುಮ್ಮಕ್ಕು:
ಕಾಂಗ್ರೆಸ್ ಪಕ್ಷ ದೇಶ ದ್ರೋಹಕ್ಕೆ ಕುಮ್ಮಕ್ಕು ಕೊಡುವ ರೀತಿ ನಡೆದುಕೊಳ್ಳುತ್ತಿದೆ. ದೇಶದಲ್ಲಿ ಯಾವಾಗ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಯೋ, ಆಗ ದೇಶ ದ್ರೋಹಿಗಳಿಗೆ ಮತ್ತು ಪಾಕಿಸ್ತಾನ ಸಮರ್ಥಕರಿಗೆ ಬಲ ಬಂದಂತೆ ಆಗುತ್ತಿದೆ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ.


ಕರ್ನಾಟಕ ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಎಂದು ಸಚಿವ ಜೋಶಿ ಆರೋಪಿಸಿದರು.


ಇದನ್ನೂ ಓದಿ : ದಾವಣಗೆರೆ : ಇತಿಹಾಸ ಪ್ರಸಿದ್ದ ಹರಿಹರೇಶ್ವರಸ್ವಾಮಿ ದೇವಸ್ಥಾನದ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ


ಕಾಂಗ್ರೆಸ್ ಗೆ, ಕರ್ನಾಟಕದ ಮುಖ್ಯಮಂತ್ರಿಗೆ ದೇಶ, ದೇಶಭಕ್ತಿ, ಭಾರತ ಮಾತೆ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಮೊದಲು ಪಾಕಿಸ್ತಾನ ಜಿಂದಾಬಾದ್ ಘೋಷಣೆಕೋರರನ್ನು ಒದ್ದು ಒಳಗೆ ಹಾಕಲಿ ಎಂದು ಸಚಿವ ಪ್ರಹ್ಲಾದ ಆಗ್ರಹಿಸಿದ್ದಾರೆ.


ತನಿಖೆಗೆ ಆಗ್ರಹ: ಕರ್ನಾಟಕ ವಿಧಾನ ಸೌಧದೊಳಗೆ ಅದೂ ರಾಜ್ಯಸಭಾ ಚನಾವಣೆ ಫಲಿತಾಂಶದ ವೇಳೆ ಕೇಳಿ ಬಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಬಗ್ಗೆ ಮುಖ್ಯಮಂತ್ರಿ, ಗೃಹ ಇಲಾಖೆ ತನಿಖೆಗೆ ಅದೇಶಿಸಬೇಕು. ರಾಜ್ಯ ಪೊಲೀಸ್ ಇಲಾಖೆ ದೇಶ ದ್ರೋಹಿಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ : ಪಾಕಿಸ್ತಾನ್ ಜಿಂದಾಬಾದ್ ಘೋಷಣೆಕೊರರನ್ನು ಮೊದಲು ಒದ್ದು ಒಳಗೆ ಹಾಕಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ     


ಸಿಎಂ ಸಿದ್ದರಾಮಯ್ಯ ಬಹಿರಂಗ ಕ್ಷಮೆ ಕೇಳಲಿ: ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದೂ ಜೋಶಿ ಆಗ್ರಹಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ 
ಮಾಡಿ.