ಹುಬ್ಬಳ್ಳಿ: ಕರ್ನಾಟಕಕ್ಕೆ ಯಾವುದೇ ಜಿಎಸ್ಟಿ ತೆರಿಗೆ ಹಂಚಿಕೆ ಬಾಕಿ ಉಳಿದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದು ಒಂದು ರಾಜಕೀಯ ನಡೆಗಾಗಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಜಿಎಸ್ಟಿ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವು ಆಗಿಲ್ಲ, ಬಾಕಿಯೂ ಉಳಿದಿಲ್ಲ ಎಂದು ಸ್ಪಷ್ಟಪಡಿಸಿದರು.


COMMERCIAL BREAK
SCROLL TO CONTINUE READING

ಬರ ಪರಿಹಾರ ಹಾಗೂ  ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.


ಇದನ್ನೂ ಓದಿ: ಕಾಂಗ್ರೆಸ್ ದು ಯಾವತ್ತೂ ಹೊಡಿ-ಬಡಿ ಸಂಸ್ಕೃತಿಯೇ: ಪ್ರಹ್ಲಾದ ಜೋಶಿ ಆಕ್ರೋಶ 


ಈ ಹಿಂದೆ ಸಿಎಂ ಸಿದ್ದರಾಮಯ್ಯ ಟೀಮ್ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಲ್ಲಾ ದಾಖಲೆಗಳ ಸಮೇತ ಉತ್ತರ ಕೊಟ್ಟಿದ್ದಾರೆ ಎಂದು ಜೋಶಿ ಸ್ಪಷ್ಟಪಡಿಸಿದರು.


ಕೇಂದ್ರದಿಂದ ಜಿಎಸ್ ಟಿ ಹಣ ಬಾಕಿ ಉಳಿಸಿಕೊಂಡಿಲ್ಲ. ಎಸ್ ಡಿಆರ್'ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದೇವೆ. ಹಾಗಿದ್ದರೂ ಸಿಎಂ ಪಡೆ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಲ್ಲದೆ, ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದು ಲೋಕಸಭೆ ಚುನಾವಣೆ ವೇಳೆ ಒಂದು ರಾಜಕೀಯ ನಡೆಯಾಗಿದೆ ಎಂದು ದೂರಿದರು.


ಕೇಂದ್ರ ಹಣಕಾಸು ಸಚಿವರಿಗೆ ಚರ್ಚೆಗೆ ಬರಲು ಸಿಎಂ ಸವಾಲು ಹಾಕಿದ್ದಾರೆ. ಆದರೆ, ಭಾರತ ಸರ್ಕಾರದ ಮಂತ್ರಿಯಾಗಿ ಹೇಳುತ್ತಿದ್ದೇನೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬರ ಪರಿಹಾರ, ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ ಎಂದು ಜೋಶಿ ಸ್ಪಷ್ಟ ಪಡಿಸಿದರು.


ಇದನ್ನೂ ಓದಿ: ಮತದಾನದ ಮೂಲಕ ಜನರೇ ಕಾಂಗ್ರೆಸ್ ಕಪಾಳಕ್ಕೆ ಹೊಡೆಯುತ್ತಾರೆ:ಬಸವರಾಜ ಬೊಮ್ಮಾಯಿ 


ಕರ್ನಾಟಕಕ್ಕೆ ವಿಶೇಷ ಅನುದಾನಕ್ಕಾಗಿ ಹಣಕಾಸು ಆಯೋಗದಿಂದ ಯಾವುದೇ ಶಿಫಾರಸ್ಸು ಇಲ್ಲ. ಕೇಂದ್ರ ಸರ್ಕಾರದಿಂದ ಹಣಕಾಸು ಆಯೋಗದ ಶಿಫಾರಸ್ಸು ಉಲ್ಲಂಘನೆಯೂ ಆಗಿಲ್ಲ ಎಂದು ಹೇಳಿದರು.


ಆಯೋಗದ ಮುಂದೆ ಸಮರ್ಥ ವಾದ ಮಂಡಿಸಲಿ: ಹಣಕಾಸು ಆಯೋಗ ಪ್ರತಿ 5 ವರ್ಷಕ್ಕೊಮ್ಮೆ ಬದಲಾವಣೆ ಕಾಣುತ್ತದೆ. ಈಗ ಅದರ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಹಣಕಾಸು ಆಯೋಗದ ಮುಂದೆ ಸಮರ್ಥ ವಾದ ಮಂಡಿಸಲಿ ಎಂದು ಸಚಿವ ಜೋಶಿ ಸಲಹೆ ಸಹ ಮಾಡಿದರು.


ರಾಜ್ಯ ಸರ್ಕಾರ ವಿಫಲ: ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಬಹುತೇಕ ಕಡೆಗೆ ಕುಡಿಯುವ ನೀರಿಗೆ ತಾತ್ವಾರ ಇದೆ. ಇದನ್ನೆಲ್ಲ ಮುಚ್ವಿಕೊಳ್ಳಲು  ರಾಜ್ಯ ಸರ್ಕಾರ, ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗಿದ್ದು, ಈ ನಡೆ ತೀವ್ರ ಖಂಡನೀಯ, ಇದು ದ್ವೇಷದ ರಾಜಕಾರಣ ಎಂದು ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.