ಸಂತ್ರಸ್ಥೆ ಕಿಡ್ನಾಪ್ ಪ್ರಕರಣ : ಭವಾನಿಗೆ ಬೇಲ್‌, ಎಸ್‌ಐಟಿ ಕರೆದಾಗಲೇಲ್ಲ ಹೋಗ್ಲೇಬೇಕು..!

Bhavani Revanna case : ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.  

Written by - VISHWANATH HARIHARA | Edited by - Krishna N K | Last Updated : Jun 7, 2024, 08:12 PM IST
    • ನಿರೀಕ್ಷಣಾ ಜಾಮೀನು ಬೆನ್ನಲ್ಲೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರ್
    • ಎಸ್ಐಟಿ ಅಧಿಕಾರಿಗಳ ಮುಂದೆ ಪ್ರತ್ಯಕ್ಷವಾದ ಭವಾನಿ ರೇವಣ್ಣ
    • ಭವಾನಿ ರೇವಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು
ಸಂತ್ರಸ್ಥೆ ಕಿಡ್ನಾಪ್ ಪ್ರಕರಣ : ಭವಾನಿಗೆ ಬೇಲ್‌, ಎಸ್‌ಐಟಿ ಕರೆದಾಗಲೇಲ್ಲ ಹೋಗ್ಲೇಬೇಕು..! title=

ಬೆಂಗಳೂರು : ಸಂತ್ರಸ್ಥೆ ಕಿಡ್ನಾಪ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣಗೆ ಇಂದು ರಿಲೀಫ್ ಸಿಕ್ಕಿದೆ. ಭವಾನಿ ರೇವಣಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಜಾಮೀನು ಸಿಕ್ಕ ಕೂಡಲೇ ಭವಾನಿ ರೇವಣ್ಣ ಎಸ್ಐಟಿ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಈ ಕುರಿತ ಕಂಪ್ಲೀಟ್ ಸ್ಟೋರಿ ಇಲ್ಲಿದೆ...

ಕೆ ಆರ್ ನಗರ ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.  

ಇದನ್ನೂ ಓದಿ:NDA ನಾಯಕರಾಗಿ ಸಂವಿಧಾನ ಪುಸ್ತಕಕ್ಕೆ ನಮಸ್ಕರಿಸಿದ ಮೋದಿ

ಸಂತ್ರಸ್ತೆ ಕಿಡ್ನಾಪ್ ಕೇಸಲ್ಲಿ ಭವಾನಿ ರೇವಣ್ಣ ಕೂಡ ಭಾಗಿಯಾಗಿದ್ದ ಬಗ್ಗೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಈ ಬಗ್ಗೆ ಕೆಲವು ಸಾಕ್ಷ್ಯಗಳನ್ನ ಸಂಗ್ರಹಿಸಿದ್ದ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದ್ರೆ ಎಸ್ಐಟಿ ವಿಚಾರಣೆಗೆ ಗೈರಾದ ಭವಾನಿ ಎಸ್ಐಟಿ ಕಣ್ತಪ್ಪಿಸಿ ನಿಗೂಢವಾಗಿದ್ದರು. ಕಳೆದ ಹದಿನೈದು ದಿನಗಳಿಂದ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣಗೆ ಇಂದು ಹೈಕೋರ್ಟ್ ರಿಲೀಫ್ ನೀಡಿದೆ. ಇದೇ ವೇಳೆ ಹೈಕೋರ್ಟ್ ಭವಾನಿ ರೇವಣ್ಣಗೆ ಕೆಲವು ಷರತ್ತುಗಳನ್ನ ಕೂಡ ವಿಧಿಸಿದೆ. ಪ್ರಕರಣದ ವಿಚಾರಣೆ  ಮುಗಿಯುವವರೆಗೂ ಕೆ ಆರ್ ನಗರ ತಾಲೂಕು ಪ್ರವೇಶ ಮಾಡಬಾರದು. ಎಸ್ಐಟಿ ತನಿಖೆಗೆ ಸಹಕಾರ ನೀಡಬೇಕು. ಹಾಗೂ ಇಂದು ಮಧ್ಯಾಹ್ನ ಒಂದು ಗಂಟೆಗೆಯೊಳಗೆ ಎಸ್ಐಟಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಇನ್ನೂ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಭವಾನಿ ರೇವಣ್ಣ ಎಸ್ಐಟಿ ಅಧಿಕಾರಿಗಳ ಮುಂದೆ ಪ್ರತ್ಯಕ್ಷವಾಗಿದ್ದರು. ತಮ್ಮ ವಕೀಲರ ಮೂಲಕ ಎಸ್ಐಟಿ ಕಚೇರಿಗೆ ಆಗಮಿಸಿದ ಭವಾನಿ ರೇವಣ್ಣ ವಿಚಾರಣೆ ಎದುರಿಸಿದರು. ಪ್ರಕರಣದ ತನಿಖಾಧಿಕಾರಿ ಹೇಮಂತ್ ಕುಮಾರ್ ಹಾಗೂ ತಂಡ ಸಂಜೆ ಐದು ಗಂಟೆಯವರೆಗೆ ತೀವ್ರ ವಿಚಾರಣೆ ನಡೆಸಿದರು. ಕಿಡ್ನಾಪ್ ಕೇಸಲ್ಲಿ ಆರೋಪಿಗಳು ನೀಡಿದ ಹೇಳಿಕೆ ಆಧಾರದ ಮೇಲೆ ಭವಾನಿ ರೇವಣ್ಣರನ್ನ ಪ್ರಶ್ನೆ ಮಾಡಿ ಅವರ ಹೇಳಿಕೆ ದಾಖಲಿಸಿಕೊಂಡರು‌..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News