ರಾಜರಾಜೇಶ್ವರಿ ನಗರದಲ್ಲಿ ಪ್ರಜ್ವಲ್ ರೇವಣ್ಣಗಿಲ್ಲ ಟಿಕೆಟ್!

ಯಾರೇ ಹೇಳಿದರು ಪ್ರಜ್ವಲ್ ರೇವಣ್ಣಗೆ ಟಿಕೇಟ್ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Last Updated : Dec 4, 2017, 03:43 PM IST
ರಾಜರಾಜೇಶ್ವರಿ ನಗರದಲ್ಲಿ ಪ್ರಜ್ವಲ್ ರೇವಣ್ಣಗಿಲ್ಲ ಟಿಕೆಟ್! title=

ಬೆಂಗಳೂರು: ರಾಜರಾಜೇಶ್ವರ್ ನಗರದಲ್ಲಿ ಪ್ರಜ್ವಲ್ ರೇವಣ್ಣಗೆ ಟಿಕೇಟ್ ನೀಡಲು ಸಾಧ್ಯವಿಲ್ಲ ಎಂದು ಸಭೆಯೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕಡ್ಡಿಮುರಿದಂತೆ ಹೇಳಿದ್ದಾರೆ.

ಕುಟುಂಬದಿಂದ ಇಬ್ಬರೇ ಸ್ಪರ್ಧೆ ಮಾಡುವುದು ಎಂದು ಹೇಳಿರುವ ಎಚ್ಡಿಕೆ, IAS ಅಧಿಕಾರಿ ದಿವಂಗತ ಡಿ.ಕೆ. ರವಿ ಮಾವ ಹನುಮಂತರಾಯಪ್ಪ ಜೆಡಿಎಸ್ ನಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂಬ ಸುಳಿವು ನೀಡಿದ್ದಾರೆ. ಅಲ್ಲದೇ, ಯಾರೇ ಹೇಳಿದರು ಪ್ರಜ್ವಲ್ ರೇವಣ್ಣಗೆ ಟಿಕೇಟ್ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಏರಿಯಾ ಪ್ಲಾನಿಂಗ್ ಅಥಾರಿಟಿಯ ಅಧ್ಯಕ್ಷರಾಗಿರುವ ಹನುಂತರಾಯಪ್ಪ ಕಾಂಗ್ರೆಸ್ ಬಿಟ್ಟು ಜೆಡಿಎಸ್ ನತ್ತ ಮುಖಮಾಡಿದ್ದಾರೆ. 

ಹನುಂತರಾಯಪ್ಪ ಜನವರಿ ಮೊದಲವಾರದಲ್ಲಿ ಜೆಡಿಎಸ್ ಸೇರುವ ಸಾಧ್ಯತೆ ಇದೆ. ಹಾಗಾಗಿ ಪ್ರಜ್ವಲ್ ರೇವಣ್ಣ ಬದಲು ಹನುಮಂತರಾಯಪ್ಪಗೆ ಟಿಕೆಟ್ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಜೆಡಿಎಸ್ ನ ಬೆಂಗಳೂರು ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಕೂಡ ರಾಜರಾಜೇಶ್ವರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ.

Trending News