ಮೂರ್ನಾಲ್ಕು ಬಾರಿ ಗೆದ್ದವರಿಗೂ ಟಿಕೆಟ್‌ ದಕ್ಕಿದೆ, ಎಂಟು ಬಾರಿ ಗೆದ್ದವರಿಗೂ ಸಿಕ್ಕಿದೆ : ಜೋಶಿ

Lok Sabha 2024 : ಮೂರ್ನಾಲ್ಕು ಬಾರಿ ಆಯ್ಕೆಯಾದವರಿಗೂ ಟಿಕೆಟ್ ಕೊಡಲಾಗಿದೆ. ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಡಲಾಗಿದೆ. ಹೈಕಮಾಂಡ್ ಆಯಾ ಕ್ಷೇತ್ರ, ಅಭ್ಯರ್ಥಿ, ಅಲ್ಲಿನ ಸ್ಥಿತಿಗತಿ ಎಲ್ಲವನ್ನು ಪರಿಗಣಿಸಿ ಟಿಕೆಟ್ ಹಂಚಿಕೆ ಮಾಡಲಿದೆ ಎಂದು ಕೇಂದ್ರ ಸಚಿವ ಜೋಶಿ ತಿಳಿಸಿದರು.

Written by - Prashobh Devanahalli | Edited by - Krishna N K | Last Updated : Mar 8, 2024, 07:26 PM IST
    • ಲೋಕಸಭೆ ಟಿಕೆಟ್ ಹಂಚಿಕೆ ಬಗ್ಗೆ ಊಹಾಪೋಹದ ಮಾತು ಬೇಡ.
    • ಮೂರ್ನಾಲ್ಕು ಬಾರಿ ಆಯ್ಕೆಯಾದವರಿಗೂ ಟಿಕೆಟ್ ಕೊಡಲಾಗಿದೆ.
    • ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ.
ಮೂರ್ನಾಲ್ಕು ಬಾರಿ ಗೆದ್ದವರಿಗೂ ಟಿಕೆಟ್‌ ದಕ್ಕಿದೆ, ಎಂಟು ಬಾರಿ ಗೆದ್ದವರಿಗೂ ಸಿಕ್ಕಿದೆ : ಜೋಶಿ title=

ಹುಬ್ಬಳ್ಳಿ : ಲೋಕಸಭೆ ಟಿಕೆಟ್ ಹಂಚಿಕೆ ಬಗ್ಗೆ ಊಹಾಪೋಹದ ಮಾತು ಬೇಡ. ಎಲ್ಲವನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮದ ವೇಳೆ ಪತ್ರಕರ್ತರ ಪ್ರಶ್ನೆಗೆ ಹೀಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಟಿಕೆಟ್ ಬಗ್ಗೆ ಸದ್ಯ ಇರುವುದೆಲ್ಲ ಉಹಾಪೋಹ. ಇದಕ್ಕೆ ಉತ್ತರ ಕೊಡುವುದಿಲ್ಲ ಎಂದು ಸ್ಪಷ್ಟ ಪಡಿಸಿದರು. ಟಿಕೆಟ್ ಹಂಚಿಕೆ ಕುರಿತಂತೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದ ಸಚಿವರು, ಹಳಬರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡ್ತಾರೆ ಅನ್ನೋದೆಲ್ಲ ಊಹಾಪೋಹ ಎಂದು ತಳ್ಳಿ ಹಾಕಿದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್‌ ಹೇಳಿಕೆ

ಮೂರ್ನಾಲ್ಕು ಬಾರಿ ಆಯ್ಕೆಯಾದವರಿಗೂ ಟಿಕೆಟ್ ಕೊಡಲಾಗಿದೆ. ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಡಲಾಗಿದೆ. ಹೈಕಮಾಂಡ್ ಆಯಾ ಕ್ಷೇತ್ರ, ಅಭ್ಯರ್ಥಿ, ಅಲ್ಲಿನ ಸ್ಥಿತಿಗತಿ ಎಲ್ಲವನ್ನು ಪರಿಗಣಿಸಿ ಟಿಕೆಟ್ ಹಂಚಿಕೆ ಮಾಡಲಿದೆ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ನರೇಗಾ ಮಾಹಿತಿ ಕೊಟ್ಟಿಲ್ಲ: ನರೇಗಾ ಹಣ ಬಳಕೆ ಬಗ್ಗೆ ಅನೇಕ ರಾಜ್ಯಗಳಲ್ಲಿ ಮಾಹಿತಿ ಕೊಟ್ಟಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಸಹ ಆಡಿಟ್ ರಿಪೋರ್ಟ್ ಕೊಟ್ಟಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ

ಮಹದಾಯಿಗೆ ಕಾಂಗ್ರೆಸ್ ಅಡ್ಡಗಾಲು: ಕಾಂಗ್ರೆಸ್‌ನವರು ಮಹದಾಯಿಗೆ ಅಡ್ಡಗಾಲು ಹಾಕುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ. ಗೋವಾಕ್ಕೆ ಹೋಗಿ ಹನಿ ನೀರು ಬಿಡಲ್ಲ ಅಂದವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರೇ ಹೊರತು ನಾವಲ್ಲಾ ಎಂದು ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು.

ಮೋದಿ ಗಿಫ್ಟ್ : ಪ್ರಧಾನಿ ನರೇಂದ್ರ ಮೋದಿಯವರು ಸಿಲಿಂಡರ್ ದರ 300 ರು. ಇಳಿಸಿ ಮಹಿಳಾ ದಿನಾಚರಣೆಗೆ ಕೊಡುಗೆ ನೀಡಿದ್ದಾರೆ ಎಂದು ಪ್ರಹ್ಲಾದ ಜೋಶಿ ಬಣ್ಣಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News