ಹುಬ್ಬಳ್ಳಿ : ಭ್ರಷ್ಟಾಚಾರ, ಹಗರಣಗಳಿಂದಾಗಿ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಕಂಡಿದೆ. ಈಗ KMF ಕೂಡ ಅದೇ ಹಾದಿಯಲ್ಲಿ ಸಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು 


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ವರ್ಷದಲ್ಲಿ ಅದೆಷ್ಟು ಬಾರಿ ಹಾಲಿನ ದರ ಹೆಚ್ಚಳ ಮಾಡುತ್ತಾರೆ ಇವರು? ಎರಡು ತಿಂಗಳ ಹಿಂದಷ್ಟೇ ಬೆಲೆ ಹೆಚ್ಚಳ ಮಾಡಿದ್ದಾರೆ. ಈಗ ಮತ್ತೆ ಬೆಲೆ ಏರಿಕೆಯೇ? ಎಂದು ಪ್ರಶ್ನಿಸಿದರು. ಅಲ್ಲದೆ, ಈ ಬಾರಿ ಹೆಚ್ಚಿಸುವ ಹಾಲಿನ ದರ ರೈತರಿಗೆ ಅನ್ನೋದು ಒಂದು ನೆಪ ಅಷ್ಟೇ. ಆರ್ಥಿಕ ದಿವಾಳಿ ಎದ್ದಿರುವ ಸರ್ಕಾರ ಆದಾಯಕ್ಕೆ ಹೀಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ ಎಂದರು.


ಇದನ್ನೂ ಓದಿ:ಪೋಷಕರ ವಿರೋಧದ ನಡುವೆ ವಿಶೇಷ ಚೇತನ ಯುವತಿ ಜೊತೆ ಮದುವೆ


ರೈತ-ಗ್ರಾಹಕರಿಗೆ ಬರೆ: ಹಿಂದೆ ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ ಇದ್ದ ಬೆಲೆಯಲ್ಲೇ ರೈತರಿಗೆ ಅಧಿಕ ದರ ಕೊಡುತ್ತಿದ್ದರು. ಗ್ರಾಹಕರಿಗೆ ಬರೆ ಎಳೆಯುತ್ತಿರಲಿಲ್ಲ. ಆದರೆ ಸಿದ್ದರಾಮಯ್ಯ ಸರ್ಕಾರ ಇತ್ತ ಗ್ರಾಹಕರು ಮತ್ತು ರೈತರು ಇಬ್ಬರಿಗೂ ಬರೆ ಎಳೆಯುತ್ತಿದೆ ಎಂದು ಆರೋಪಿಸಿದರು.


ಪ್ರೋತ್ಸಾಹ ಧನ ಬಂದ್: ರಾಜ್ಯದಲ್ಲಿ ಯಡಿಯೂರಪ್ಪ ಅವರು 4  ರೂಪಾಯಿ ಪ್ರೋತ್ಸಾಹ ಧನ ಕೊಟ್ಟರು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಾಲು ಉತ್ಪಾದಕರಿಗೆ  ಪ್ರೋತ್ಸಾಹ ದರವನ್ನೇ ಕೊಟ್ಟಿಲ್ಲ. ಅದನ್ನೂ ಬಂದ್ ಮಾಡಿದ್ದಾರೆ ಇವರು ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ:ಬಾಂಗ್ಲಾದಂತೆ ಹಿಂದೂ ಹಬ್ಬಗಳ ಮೇಲೆ ಮುಸ್ಲೀಮರ ಗೂಂಡಾಗಿರಿ: ಶಾಸಕ ಯತ್ನಾಳ್‌ ಕಿಡಿ


ರೈತರಿಗೆ 3 ತಿಂಗಳೂ ಕೊಡಲ್ಲ: ರೈತರಿಗೆ ಎಂದು ಹೆಚ್ಚಿಸುವ ಹಾಲಿನ ದರದ ಮೊತ್ತವನ್ನು ಈ ಸರ್ಕಾರ ರೈತರಿಗೆ ಮೂರು ತಿಂಗಳೂ ಕೊಡಲ್ಲ. ಸುಮ್ಮನೇ ರೈತರ ನೆಪವೊಡ್ಡಿ ಗ್ರಾಹಕರ ಕಣ್ಣಿಗೆ ಮಣ್ಣೆರೆಚುತ್ತಿದೆ ಎಂದು ಹೇಳಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ. ಯುಪಿಎ ಸರ್ಕಾರದಂತೆ ಇದೂ ದಿನಕ್ಕೊಂದು ಹಗರಣದಲ್ಲಿ ತೊಡಗಿದೆ ಎಂದು ಕಿಡಿ ಕಾರಿದರು.


ದೇಶದಲ್ಲಿ ಭ್ರಷ್ಟಾಚಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೊಡೆದಾಡುತ್ತ ಶುದ್ಧ ಆಡಳಿತ ನೀಡುತ್ತಿದ್ದರೆ, ಇಲ್ಲಿ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ, ಮೂಡಾ ಹೀಗೆ ಹಗರಣಗಳ ಸರಮಾಲೆ ಹೋದ್ದುಕೊಂಡಿದೆ ಎಂದು ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.