ಬೆಳಗಾವಿ:  ಗಣೇಶೋತ್ಸವದಲ್ಲಿ ಡಿಜೆಗಳಿಗೆ ನೀಡಬೇಕೆಂದು ಶ್ರೀರಾಮ ಸೇನೆ ಮುಖಂಡ ಮುತಾಲಿಕ್ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು ಕೋವಿಡ್ ಕಾರಣ ಎರಡು ವರ್ಷ ಸಾರ್ವಜನಿಕ ಗಣೇಶೋತ್ಸವ ಆಗಿರಲಿಲ್ಲ, ಈ ವರ್ಷದಿಂದ ಮುಕ್ತವಾದ ಗಣೇಶೋತ್ಸವ ಕಾರ್ಯಕ್ರಮ ನಡೀತಿದೆ ಹಾಗಾಗಿ ಸೌಂಡ್ ಸಿಸ್ಟಮ್, ಲೈಟಿಂಗ್‌ನವರಿಗೆ ಯಾವದೇ ರೀತಿಯ ನಿರ್ಬಂಧ ಹಾಕಬಾರದು ಎಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: Kichcha Sudeep : ಕಿಚ್ಚ ಸುದೀಪ್ ಹೆಸರಲ್ಲಿ 'ವಿಶೇಷ ಅಂಚೆ ಲಕೋಟೆ' ಹೊರ ತರಲಿದೆ ಅಂಚೆ ಇಲಾಖೆ


ಇನ್ನೂ ಮುಂದುವರೆದು ಮಾತನಾಡಿದ ಅವರು "ಈಗ ಡಿಜೆಗಳಿಗೆ ವಿಧಿಸಿರುವ ನಿರ್ಬಂಧದಿಂದಾಗಿ ಸೌಂಡ್ ಸಿಸ್ಟಮ್, ಲೈಟಿಂಗ್‌ನವರು ಸಾಲಸೋಲ ಮಾಡಿ ಕಷ್ಟ ಅನುಭವಿಸುವಂತಾಗಿದೆ.ಆದ್ದರಿಂದ ಸರ್ಕಾರ ಮತ್ತು ಪೋಲಿಸ್ ಇಲಾಖೆಗೆ ನಾನು ಹೇಳುವುದಿಷ್ಟೇ ಡಿಜೆ ಹಾಕಬೇಡಿ, ಸೌಂಡ್ ಹಾಕಬೇಡಿ ಅನುಮತಿ ಪಡೆಯಬೇಕು ಅಂತಾ ಕಿರಿಕಿರಿ ಮಾಡಬೇಡಿ,ಈ ಬಾರಿ ಗಣೇಶೋತ್ಸವದಲ್ಲಿ ಡಿಜೆಗಳಿಗೆ ಅನುಮತಿ ನೀಡುವುದರಿಂದ ಅವರ ಬದುಕಿಗೆ ಒಂದು ಆಧಾರ ಆಗುತ್ತೆ ಎಂದು ಅವರು ಹೇಳಿದ್ದಾರೆ.


ಇದನ್ನೂ: ಗಣೇಶ ಚತುರ್ಥಿ ಹಿನ್ನೆಲೆ ಚಾಮರಾಜಪೇಟೆ ಈದ್ಗಾ ಮೈದಾನದ ಸುತ್ತ ಖಾಕಿ ಸರ್ಪಗಾವಲು


ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಪ್ರಮೋದ್ ಮುತಾಲಿಕ್ ಕರೆ


ಸ್ವತಂತ್ರವಾಗಿ ಆಚರಣೆಗೆ ಅವಕಾಶ ಕೊಡಿ ಅವರ ಹೊಟ್ಟೆ ಮೇಲೆ ಕಲ್ಲು ಹಾಕಬೇಡಿ, ಡಿಜೆ ಸೀಜ್ ಮಾಡ್ತೀವಿ ಅನ್ನೋ ಹೆದರಿಸುವ ಪ್ರಕ್ರಿಯೆ ಮಾಡಬಾರದು, ವರ್ಷಕ್ಕೊಮ್ಮೆ ಡಿಜೆ ಹಾಕಿ ಆನಂದದಿಂದ ಹಬ್ಬದ ಆಚರಣೆಯನ್ನು ಸುಪ್ರೀಂಕೋರ್ಟ್ ಆಜ್ಞೆ ಬಗ್ಗೆ ನೀವು ಹೇಳುವುದಾದರೆ ಅದೇ ಸುಪ್ರೀಂಕೋರ್ಟ್ ಪ್ರತಿ ದಿವಸ ಮಸೀದಿಗಳಲ್ಲಿ ಐದು ಬಾರಿ ನಮಾಜ್ ಮಾಡೋದು ಎಷ್ಟು ಕಿರಿಕಿರಿ ಆಗ್ತಿದೆ. ಒಂದೇ ಒಂದು ಮಸೀದಿಯ ಮೈಕ್ ಕೆಳಗಿಳಿಸಿ ಸೀಜ್ ಮಾಡಿದ್ದು ತೋರಿಸಿ. ನಿಮ್ಮ ಕಾನೂನು ಹಿಂದೂಗಳಿಗೆ ಮಾತ್ರ ಆಗುತ್ತಾ? ಮುಸ್ಲಿಮರಿಗೆ ಇಲ್ವಾ? ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ಮಾಡಿಕೊಡಿ ಇಲ್ಲ ಅಂದ್ರೆ ನಾನು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಹೇಳುತ್ತಿದ್ದೇ‌ನೆ ಡಿಜೆಯನ್ನು ಹಚ್ಚಿ ಮೆರವಣಿಗೆ ಮಾಡಿ ಯಾರು ತಡೀತಾರೆ ನೋಡೋಣ, ಅಕಸ್ಮಾತ್ ತಡೆದ್ರೆ ಪೊಲೀಸ್ ಠಾಣೆ ಎದುರು ಗಣೇಶನ ಇಟ್ಟುಕೊಂಡು ಧರಣಿ ಮಾಡಿ ಎಂದು ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.