DCM DK Shivakumar: “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು.
ಇದನ್ನೂ ಓದಿ: ಪ್ರಭಾವಿ ರಾಜಕಾರಣಿಗಳ ಜೊತೆ ಡೇಟಿಂಗ್ ಬರುವಂತೆ ನಟಿ ನಮ್ರತಾ ಗೌಡಗೆ ಕಿರುಕುಳ
ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ, “ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ” ಎಂದರು.
ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ, “ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ” ಎಂದರು.
ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದರು.
“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದರು.
ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದರು.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಶೇ.44 ರಷ್ಟು ವೇತನ ಹೆಚ್ಚಳ! ಈಗ ಖಾತೆ ಸೇರುವ ಒಟ್ಟು ವೇತನ ಎಷ್ಟು? ಇಲ್ಲಿದೆ ಲೆಕ್ಕಾಚಾರ
63 ನೇ ಹುಟ್ಟುಹಬ್ಬ ಆಚರಣೆಗೆ ಶುಭಸುದ್ದಿ ನೀಡುವಿರಾ ಎಂದು ಕೇಳಿದಾಗ, “ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ಹೊರಗಡೆ ಹೋಗುವುದು ಬೇಡವೆಂದು ನಮ್ಮ ಕುಟುಂಬ ಸದಸ್ಯರ ಜೊತೆ ರಾಜ್ಯದ ಅರಣ್ಯ ಸಂಪತ್ತು ವೀಕ್ಷಣೆ ಮಾಡಿದ್ದೇನೆ. ಈ ಬಗ್ಗೆ ನಿಮ್ಮೆಲ್ಲರ ಆಶೀರ್ವಾದವಿರಲಿ” ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









