ಬೆಂಗಳೂರು: ಇದೇ 29ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. 


COMMERCIAL BREAK
SCROLL TO CONTINUE READING

ಅ. 29ರಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವ ಮೋದಿ, ಅರಮನೆ ಮೈದಾನದಲ್ಲಿ ನಡೆಯಲಿರುವ ಧಾರ್ಮಿಕ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಡತೊರೆ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಸತ್ಸಂಗ ಲಹರಿ ಪಾರಾಯಣೋತ್ಸವ ಮಹಾಸಮರ್ಪಣೆ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅದೇ ದಿನ ಮಧ್ಯಾಹ್ನ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ತೆರಳಲಿದ್ದಾರೆ.


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾರಂಭದಲ್ಲಿ ಭಾಗಿಯಾಗಲಿರುವ ನಮೋ, ದಕ್ಷಿಣಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಮಧ್ಯಾಹ್ನ ಬೀದರ್​ಗೆ ತೆರಳಲಿದ್ದಾರೆ. 


ಬೀದರ್-ಕಲಬುರ್ಗಿ ರೈಲು ಮಾರ್ಗ ಲೋಕಾರ್ಪಣೆ ಮಾಡಲಿದ್ದಾರೆ. ಅದೇ ದಿನ ಬೀದರ್​ನಲ್ಲಿ ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶ ಉದ್ಘಾಟಿಸಲಿರುವ ಪ್ರಧಾನಿ ಬಳಿಕ ಬೀದರ್​ನಿಂದ ದೆಹಲಿಗೆ ವಾಪಸ್ಸಾಗಲಿದ್ದಾರೆ.