ಯಡಿಯೂರಪ್ಪನವರ ಗಟ್ಟಿತನವನ್ನ ನಾನು ನೋಡಿದೆ. ರೈತರ ಕಲ್ಯಾಣಕ್ಕಾಗಿ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಕೂಡ ಅವರು ನನ್ನ ಜೊತೆ ರೈತರ ಸಮಸ್ಯೆಗಳ ಬಗ್ಗೆ ಮಾತಮಾಡಿದ್ದರು. ಈಗ ಅದನ್ನು ಕಣ್ಣಾರೆ ಕಂಡೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ್ದಾರೆ. 



COMMERCIAL BREAK
SCROLL TO CONTINUE READING

 


ಭಾನುವಾರ ಕರ್ನಾಟಕ ಪ್ರವಾಸದ ವೇಳೆ ಇಡೀ ದಿನ ಪ್ರಧಾನಿ ಜೊತೆಗೆ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಗ್ಗೆ ಪ್ರಧಾನಿ ಟ್ವಿಟ್ಟರ್ ಮೂಲಕ ಎಚ್ಚುಗೆ ಮಾತನ್ನಾಡಿದ್ದಾರೆ. ಯಡಿಯೂರಪ್ಪ ಅವರನ್ನು ಬಿಜೆಪಿಯು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ.