ಇಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಿರುವ ಖಾಸಗಿ ವೈದ್ಯರು

                      

Last Updated : Nov 13, 2017, 09:08 AM IST
ಇಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಿರುವ ಖಾಸಗಿ ವೈದ್ಯರು title=
ಬೆಂಗಳೂರು: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಇಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
 
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕವನ್ನು ತೆಗೆದು ಹಾಕುವಂತೆ ಒತ್ತಾಯಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ವೈದ್ಯರು ನಿರ್ಧರಿಸಿದ್ದಾರೆ.
 
ಕಳೆದ ರಾತ್ರಿ ಬೆಂಗಳೂರಿನಿಂದ 30 ಬಸ್ಸುಗಳಲ್ಲಿ ವೈದ್ಯರ ತಂಡ ತೆರಳಿದ್ದು, ಸುಮಾರು 25 ಸಾವಿರಕ್ಕೂ ಹೆಚ್ಚಿನ ವೈದ್ಯರು ರಾಜ್ಯದ ನಾನಾ ಭಾಗಗಳಿಂದ ಬೆಳಗಾವಿಗೆ ಆಗಮಿಸುತ್ತಿದ್ದಾರೆ. 
 
ಕೆಪಿಎಂಇ ವಿಧೇಯಕ ತಿದ್ದುಪಡಿ ವಿರೋಧಿ ಪ್ರತಿಭಟಿಸಲು ವೈದ್ಯರು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬಂದ್ ಆಗಿದೆ. 
 
ನ. 3ರಂದು ಒಂದು ದಿನದ ಪ್ರತಿಭಟನೆ ನಡೆಸಿದ ವೈದ್ಯರು ಸರ್ಕಾರಕ್ಕೆ ಒಂದು ವಾರದ ಗಡುವನ್ನು ನೀಡಿದ್ದರು. ಅವರ ಬೇಡಿಕೆಗೆ ಸರ್ಕಾರ ಇನ್ನೂ ಕಿವಿ ಕೊಡದ ಹಿನ್ನೆಲೆಯಲ್ಲಿ ಇಂದು ಸುವರ್ಣ ಸೌಧದ ಮುತ್ತಿಗೆಗೆ ನಿರ್ಧಾರ ಕೈಗೊಂಡಿರುವುದಾಗಿ ಖಾಸಗಿ ಆಸ್ಪತ್ರೆಗಳ ಒಕ್ಕೂಟ ತಿಳಿಸಿದೆ.
 

Trending News