ಚೈತ್ರಾ ಕುಂದಾಪುರ ಕೇಸ್‌ನಲ್ಲಿ ಐಟಿ ದಾಳಿ ಯಾಕಾಗಿಲ್ಲ : ಪ್ರಿಯಾಂಕ್ ಖರ್ಗೆ ಪ್ರಶ್ನೆ 

ಐಟಿ ಇಲಾಖೆಯಲ್ಲಿ ಸೆಲೆಕ್ಟಿವ್ ರೇಡ್ ಯಾಕಾಗ್ತಿದೆ? ಐಟಿ, ಇಡಿ ಎಲ್ಲಾ ಬಿಜೆಪಿಯವರ ಕೈಯಲ್ಲೇ ಇದೆ, ತನಿಖೆ ಮಾಡಲಿ ಎಂದು ಸವಾಲು ಹಾಕಿದರು. ಚೈತ್ರಾ ಕುಂದಾಪುರ ಕೇಸ್ ನಲ್ಲಿ ಐಟಿ ರೇಡ್ ಯಾಕ್ ಆಗಿಲ್ಲ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಮಾಡಿದರು.

Written by - RACHAPPA SUTTUR | Edited by - Krishna N K | Last Updated : Oct 14, 2023, 03:55 PM IST
  • ಚೈತ್ರಾ ಕುಂದಾಪುರ ಕೇಸ್ ನಲ್ಲಿ ಐಟಿ ದಾಳಿ ಯಾಕಾಗಿಲ್ಲ?
  • ಐಟಿ ಇಲಾಖೆಯಲ್ಲಿ ಸೆಲೆಕ್ಟಿವ್ ರೇಡ್ ಯಾಕಾಗ್ತಿದೆ?
  • ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಕೇಸ್‌ನಲ್ಲಿ ಐಟಿ ದಾಳಿ ಯಾಕಾಗಿಲ್ಲ : ಪ್ರಿಯಾಂಕ್ ಖರ್ಗೆ ಪ್ರಶ್ನೆ  title=

ಬೆಂಗಳೂರು : ಚೈತ್ರಾ ಕುಂದಾಪುರ ಕೇಸ್ ನಲ್ಲಿ ಐಟಿ ದಾಳಿ ಯಾಕಾಗಿಲ್ಲ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಐಟಿ ದಾಳಿ ವಿಚಾರವಾಗಿ ಮಾಜಿ ಸಿಎಂ ಎಚ್ ಡಿಕೆ ಹಾಗೂ ಬಿಜೆಪಿ‌ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.

ಗುತ್ತಿಗೆದಾರರಿಂದ ಕಲೆಕ್ಷನ್ ಮಾಡಿದ್ದಾರೆ ಅನ್ನೋದು ಹಾಸ್ಯಾಸ್ಪದ ಹೇಳಿಕೆ. ಐಟಿ ಇಲಾಖೆಯಲ್ಲಿ ಸೆಲೆಕ್ಟಿವ್ ರೇಡ್ ಯಾಕಾಗ್ತಿದೆ? ಐಟಿ, ಇಡಿ ಎಲ್ಲಾ ಬಿಜೆಪಿಯವರ ಕೈಯಲ್ಲೇ ಇದೆ, ತನಿಖೆ ಮಾಡಲಿ ಎಂದು ಸವಾಲು ಹಾಕಿದರು. ಚೈತ್ರಾ ಕುಂದಾಪುರ ಕೇಸ್ ನಲ್ಲಿ ಐಟಿ ರೇಡ್ ಯಾಕ್ ಆಗಿಲ್ಲ? ಹಣ ವರ್ಗಾವಣೆ ನಡೆದಿತ್ತಲ್ಲಾ ರೇಡ್ ಯಾಕ್ ಆಗ್ಲಿಲ್ಲ. ರಾಜಕೀಯ ಪ್ರೇರಿತ ರೇಡ್ ಮಾಡ್ತಿದ್ದಾರೆ. ತನಿಖೆ ಆಗಲಿ, ಉಪ್ಪು ತಿಂದೋರು ನೀರು ಕುಡಿಯಲೇಬೇಕು ಎಂದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ಕಲೆಕ್ಷನ್ ಮಾಡಲಾಗಿದೆ ಎಂದು ಆರೋಪ ಮಾಡುವ ಬಿಜೆಪಿಯರಿಗೆ ಮೇಲೆ ಬಾಸ್ ಗಳಿದ್ದಾರಲ್ಲ, ಹೋಗಿ ಸಾಕ್ಷಿ ಕೊಡಲಿ ಎಂದು ಇದೇ ಸಂದರ್ಭದಲ್ಲಿ ಸವಾಲು ಹಾಕಿದರು. ಎಚ್ ಡಿಕೆ ಬಿಜೆಪಿ ಜೊತೆ ವಿಲೀನ ಆಗಿಬಿಟ್ಟಿದ್ದಾರೆ. ಕುಮಾರಸ್ವಾಮಿ ಅವರು ನೇರವಾಗಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡ್ತಾರೆ.‌ಡೈರಿ, ಪೆನ್ ಡ್ರೈವ್ ಎಲ್ಲಾ ಕೊಡಿ ಅವರಿಗೆ ಎಂದು ತಿರುಗೇಟು ನೀಡಿದರು.

ವಿಪಕ್ಷದಲ್ಲಿರೋರನ್ನು ಟಾರ್ಗೆಟ್ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಗುಜರಾತ್ ಸೇರಿ ಎಲ್ಲಾ ಕಡೆ ವಿಪಕ್ಷಗಳ ಮೇಲೆ ರೇಡ್ ಮಾಡ್ತಿದ್ದಾರೆ. ಎಷ್ಟು ಜನ ಬಿಜೆಪಿಯವರ ಮೇಲೆ ರೇಡ್ ಆಗಿದೆ? ಈ ಬಗ್ಗೆ ಲೆಕ್ಕ ತಗೆದುಕೊಳ್ಳಿ. ಯಾಕೆ ಅದಾನಿ ಮೇಲೆ ರೇಡ್ ಅಗ್ತಿಲ್ಲ? ಐಟಿ, ಇಡಿ ರೇಡ್ ಗೆಲ್ಲಾ ನಾವು ಬಗ್ಗೋರಲ್ಲ, ಜಗ್ಗೋರಲ್ಲ ಎಂದರು.

ಇದನ್ನೂ ಓದಿ:ಮತ್ತೆ ತಮಿಳುನಾಡಿಗೆ ನೀರು ಬಿಡಲು ಆದೇಶ: ಇಂದು ಮುಂದುವರೆಯಲಿರುವ ಕಾವೇರಿ ಹೋರಾಟ

ಗಾಳಿಯಲ್ಲಿ ಗುಂಡು ಹೊಡೆಯೋದಕ್ಕಿಂತ ಸಾಕ್ಷಿ ಕೊಡಿ : ಅಮಿತ್ ಶಾ ಇದಕ್ಕೂ ಅಪಾಯಿಂಟ್ಮೆಂಟ್ ಕೊಡಲ್ವಾ?ವಿಪಕ್ಷ ನಾಯಕನ ಆಯ್ಕೆಗಂತೂ ಅಪಾಯಿಂಟ್ಮೆಂಟ್ ಕೊಡಲ್ಲ. ಬಿಜೆಪಿ ಮನೆ ಒಂದು ಬಾಗಿಲು ನೂರಾಗಿದೆ.‌ ಯಾರು ಲೀಡರ್ ಅಂತಾ ಗೊತ್ತಾಗ್ತಾನೇ ಇಲ್ಲ ಅವರಿಗೆ. ಅಲ್ಲಿ ಮೈತ್ರಿ ಆಗುತ್ತೆ, ಒಬ್ಬ ಲೀಡರ್ ಆದ್ರೂ ಇದ್ರೇನ್ರೀ? ಜನತಾದಳ ಜನತೆ ಜೊತೆಯೂ ಇಲ್ಲ, ದಳವಾಗಿಯೂ ಉಳಿದಿಲ್ಲ. ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳೋದನ್ನ ಬಿಟ್ರೆ, ಬೇರೆ ಏನಾದ್ರೂ ಬಿಜೆಪಿಯವರಿಗೆ ಬರುತ್ತಾ? ಎಂದು ಕಿಡಿಕಾರಿದರು.

ಯಾವುದಾದ್ರೂ ಹತ್ತು ಯೋಜನೆಗಳನ್ನ ಹೇಳಲಿ ನೋಡೋಣ. ಸದಾನಂದಗೌಡರು ಹೇಳಿದ್ದಾರೆ, ಕೇಂದ್ರ ಸಚಿವರು ಆಗಿದ್ರು.  ರಾಜ್ಯ ನಾಯಕರಿಗೆ ಶಿಪ್ ಗೆ ಬೆನ್ನೆಲುಬೇ ಇಲ್ಲ. ಕಮಿಷನ್, ಕಲೆಕ್ಷನ್ ಗೆಲ್ಲಾ ದಾಖಲೆ ಕೊಡಿ ಸರ್. ನಾವು ದಾಖಲೆ ಇಟ್ಟೇ 40% ಕಮಿಷನ್ ಆರೋಪ‌ ಮಾಡಿದ್ದು.‌‌ಪೆನ್ ಡ್ರೈವ್ ಎಲ್ಲೋಯ್ತು ಸರ್ ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ನಗರ ಸಭೆ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ, ಗಂಭೀರ ಗಾಯ

ಸರ್ಕಾರ ಬೀಳುತ್ತೆ, ಎಚ್ ಡಿಕೆ ಸಿಎಂ ಆಗ್ತಾರೆ ಅನ್ನೋ ವಿಚಾರವಾಗಿ ಮಾತನಾಡಿ, ಅವರ ಸರ್ಕಾರ ಉಳಿಸಿಕೊಳ್ಳೋದಕ್ಕೇ ಆಗಲಿಲ್ಲ. ನಮ್ಮ ಸರ್ಕಾರ ಎಲ್ಲಿ ಬೀಳಿಸ್ತಾರೆ. ಅವರಿಗೊಬ್ಬರಿಗೇ ಬರುತ್ತಾ ರಾಜಕೀಯ ಮಾಡೋಕೆ. ಸರ್ಕಾರ ಬೀಳಿಸಿ ನೋಡಲಿ. ಆಪರೇಶನ್ ಹಸ್ತ ನಮಗೆ ಅವಶ್ಯಕತೆಯೇ ಇಲ್ಲ. ಅವ್ರೇ ಬಿಟ್ಟು ಬರ್ತಾ ಇದ್ದಾರೆ. ಸರ್ಕಾರ ಬೀಳಿಸಲು ಸರ್ಕಸ್ ಮಾಡ್ತಿರಬಹುದು ಎಂದರು.

ತೆಲಂಗಾಣದಲ್ಲಿ ಬಿಜೆಪಿ ಅಡ್ರೆಸ್ ಇಲ್ಲ. ಎಚ್ ಡಿಕೆ ಆಲ್ ಮೋಸ್ಟ್ ವಿಪಕ್ಷ ನಾಯಕ ಆಗಿಬಿಟ್ಟಿದ್ದಾರೆ, ಅದಕ್ಕೆ ಮಾತಾಡ್ತಿದ್ದಾರೆ. ಘಟಾನುಘಟಿ ಲೀಡರ್ ಗಳು ಮಾತಾಡಬೇಕಾದ್ರೆ ತೂಕ ಇರಬೇಕು. ಹುಡುಗರ ರೀತಿ ಮಾತಾಡಬಾರದು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News