ಚಾಮರಾಜನಗರದಲ್ಲಿ ದರ್ಶನ್ ವಿರುದ್ಧ ಪ್ರತಿಭಟನೆ: ಚಿತ್ರದ ಸಿಡಿ ಸುಟ್ಟು ಆಕ್ರೋಶ

ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.

Written by - Yashaswini V | Last Updated : Jun 18, 2024, 02:46 PM IST
  • ಚಾಮರಾಜನಗರದಲ್ಲಿ ನಟ ದರ್ಶನ್ ವಿರುದ್ದ ಬೃಹತ್ ಪ್ರತಿಭಟನೆ
  • ನಟ ದರ್ಶನ್ ಟೀಂ ನಡೆಸಿರುವ ಕೊಲೆ ಪ್ರಕರಣ ಖಂಡಿಸಿ ರಸ್ತೆತಡೆ ನಡೆಸಿ ಪ್ರತಿಭಟನೆ.
  • ವೀರಶೈವ ಲಿಂಗಾಯಿತ ಮಹಾಸಭಾದ ವತಿಯಿಂದ ಬೃಹತ್ ಪ್ರತಿಭಟನೆ
ಚಾಮರಾಜನಗರದಲ್ಲಿ  ದರ್ಶನ್ ವಿರುದ್ಧ ಪ್ರತಿಭಟನೆ: ಚಿತ್ರದ ಸಿಡಿ ಸುಟ್ಟು ಆಕ್ರೋಶ title=

ಚಾಮರಾಜನಗರ: ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರನಟ ದರ್ಶನ್ (Actor Darshan) ಮತ್ತು ಗ್ಯಾಂಗ್ ವಿರುದ್ಧ ಚಾಮರಾಜನಗರದಲ್ಲಿ ಮಠಾಧೀಶರ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು‌.

ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ (National Highway) ತಡೆದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ- ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?

ಭುವನೇಶ್ವರಿ ವೃತ್ತ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ರಚಿಸಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ದರ್ಶನ್ ನಟನೆಯ ಸಿನಿಮಾ ಸಿಡಿಗಳು (Film CDs), ಪೋಸ್ಟರ್ ಗಳನ್ನು ಸುಟ್ಟು ಆಕ್ರೊಶ ಹೊರಹಾಕಿದರು.

ಈ ನಡುವೆ ಪೊಲೀಸರು ಮಧ್ಯ ಪ್ರವೇಶ ಮಾಡಿದ್ದರಿಂದ ಕೆಲಕಾಲ ಪ್ರತಿಭಟನಾಕಾರರು ಹಾಗೂ ಖಾಕಿ ನಡುವೆ ಜಟಾಪಟಿ ನಡೆಯಿತು.

ಇದನ್ನೂ ಓದಿ- Darshan Arrest: ದರ್ಶನ್‌, ಪರಮೇಶ್ವರ್ ಎಲ್ಲರಿಗೂ ಕಾನೂನು ಒಂದೇ- ಗೃಹ ಸಚಿವ ಡಾ. ಜಿ ಪರಮೇಶ್ವರ್

ಬಳಿಕ, ಜಿಲ್ಲಾಡಳಿತ ಭನವನದ ತನಕ ಮೆರವಣಿಗೆಯಲ್ಲಿ ತೆರಳಿ ನಟನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು‌. ದರ್ಶನ್ ಟೀಂಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News