ರಾಯಚೂರು: ಕೆಪಿಎಸ್‌ಸಿ  (KPSC)ಆಯೋಜಿಸಿದ್ದ ಲೋಕೋಪಯೋಗಿ ಇಲಾಖೆಯ ಎಇ (AE) ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ರೈಲು ತಡವಾಗಿದ್ದರಿಂದ ಆಕ್ರೋಶಗೊಂಡು ಪ್ರತಿಭಟನೆ (Protest in Raichuru) ನಡೆಸಿದ ಘಟನೆ ರಾಯಚೂರಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಮಂಗಳವಾರ ಬೆಳಗ್ಗೆ 6 ಗಂಟೆಗೆ ಕಲಬುರಗಿ ತಲುಪಬೇಕಿದ್ದವರು, 9 ಗಂಟೆಯಾದರೂ ರಾಯಚೂರಿನಲ್ಲೇ ಉಳಿಯುವಂತಾಗಿತ್ತು. ರೊಚ್ಚಿಗೆದ್ದ ಅಕಾಂಕ್ಷಿಗಳು ಹಾಸನ-ಸೋಲ್ಲಾಪುರ ರೈಲು (Hassan-Solapur Train) ತಡೆದು ಪ್ರತಿಭಟಿಸಿದರು


ಕಾಮಗಾರಿ ಎಫೆಕ್ಟ್:


ಹಿಂದೂಪುರದಲ್ಲಿ (Hindupura) ನಡೆಯುತ್ತಿರುವ ಡಬ್ಲಿಂಗ್ ಕಾಮಗಾರಿಯಿಂದಾಗಿ ತಾಂತ್ರಿಕ ಸಮಸ್ಯೆಗಳ ಕಾರಣ ನಿನ್ನೆ ರಾತ್ರಿ ಕೆಲ ರೈಲುಗಳನ್ನು ತಡೆಹಿಡಿಯಲಾಗಿತ್ತು. ಹೀಗಾಗಿ ಅಭ್ಯರ್ಥಿಗಳಿಗೆ ಸಮಸ್ಯೆ ಎದುರಾಗಿತ್ತು. 1000ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಘೋಷಣೆ ಕೂಗಿ, ಪರೀಕ್ಷೆ ದಿನ ಮುಂದೂಡಲು ಒತ್ತಾಯಿಸಿದರು.


3 ವರ್ಷಗಳ ಬಳಿಕ ಪರೀಕ್ಷೆ:


ಅರ್ಜಿ ಸಲ್ಲಿಸಿ ಮೂರು ವರ್ಷಗಳ ಬಳಿಕ ಪರೀಕ್ಷೆ ನಡೆಸಲಾಗುತ್ತಿತ್ತು. ಇದೀಗ ಮತ್ತೆ ಪರೀಕ್ಷೆ ಕೈತಪ್ಪಿದ್ದಕ್ಕೆ ಬೇಸರಗೊಂಡ ಅಭ್ಯರ್ಥಿಗಳು ರೈಲು ಟ್ರ್ಯಾಕ್ (Railway Track) ಮೇಲೆ ನಿಂತು ಆಕ್ರೋಶ ಹೊರಹಾಕಿದ್ರು.


ಅದಲು-ಬದಲು ಆಟ:


ದಕ್ಷಿಣ ಭಾಗದ ಜಿಲ್ಲೆಗಳ ಅರ್ಜಿದಾರರಿಗೆ ಉತ್ತರ ಕರ್ನಾಟಕ ಭಾಗದಲ್ಲಿ ಅದಲು ಬದಲು ಮಾಡಿ ಪರೀಕ್ಷಾ ಕೇಂದ್ರ (Exam Centre) ನೀಡಲಾಗಿತ್ತು. ಈ ಕಾರಣಕ್ಕೆ ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಿಂದ ಹಾಸನ-ಸೋಲ್ಲಾಪುರ ರೈಲಿನಲ್ಲಿ ಬರುತ್ತಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರೂ ಅಭ್ಯರ್ಥಿಗಳು ಪ್ರತಿಭಟನೆ ಹಿಂಪಡೆದಿಲ್ಲ.


ಇದನ್ನೂ ಓದಿ: ವಿಧಾನಪರಿಷತ್ ಚುನಾವಣಾ ಫಲಿತಾಂಶ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ತಲಾ ಒಂದೊಂದು ಸ್ಥಾನದಲ್ಲಿ ಗೆಲುವು


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.