ಬೀಡಿಗಾಗಿ ಅನ್ನ ಆಹಾರ ಬಿಟ್ಟು ಪ್ರತಿಭಟನೆ ! ಬೇಡಿಕೆ ಈಡೇರಿಕೆಗೆ ಹೋರಾಟದ ಹಾದಿ ಹಿಡಿದ 778 ಕೈದಿಗಳು

ಕಾರವಾರ ಜೈಲಿನಲ್ಲಿ ತಂಬಾಕಿಗಾಗಿ ರಾದ್ದಾಂತ ನಡೆದಂತೆ, ಇವತ್ತು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಬೀಡಿಗಾಗಿ ಪ್ರತಿಭಟನೆ ನಡೆಸಿದ್ದಾರೆ.   

Written by - Ranjitha R K | Last Updated : Sep 2, 2024, 02:08 PM IST
  • ಬೀಡಿಗಾಗಿ ಕೈದಿಗಳ ಪ್ರತಿಭಟನೆ
  • ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಪ್ರತಿಭಟನೆ
  • 778 ಕೈದಿಗಳು ಬೆಳಗ್ಗಿನ ಉಪಹಾರವನ್ನು ಸೇವಿಸಿದೇ ಪ್ರತಿಭಟನೆ
ಬೀಡಿಗಾಗಿ ಅನ್ನ ಆಹಾರ ಬಿಟ್ಟು ಪ್ರತಿಭಟನೆ ! ಬೇಡಿಕೆ ಈಡೇರಿಕೆಗೆ ಹೋರಾಟದ ಹಾದಿ ಹಿಡಿದ 778  ಕೈದಿಗಳು  title=

ಶಿವಮೊಗ್ಗ : ನಟ ದರ್ಶನ್‌ನಿಗೆ ಸಿಕ್ಕ ರಾಜಾತಿಥ್ಯದ ಪ್ರಕರಣದ ಪರಿಣಾಮ ಇದೀಗ ರಾಜ್ಯದ ಎಲ್ಲಾ ಜೈಲುಗಳ ಮೇಲೆ ಬಿದ್ದಿದೆ.ಬೆಂಗಳೂರು ಪರಪ್ಪನ ಅಗ್ರಹಾರದಿಂದ ಹೊರಬಿದ್ದ ಫೋಟೋಗಳು ಕಾರಾಗೃಹ ಇಲಾಖೆಯಲ್ಲಿ ಅತಿದೊಡ್ಡ ಅಮಾನತ್ತು ಶಿಕ್ಷೆಗೆ ಕಾರಣವಾಗಿತ್ತು. 

ಅಲ್ಲದೆ ಈ ಘಟನೆ ಬಳಿಕ ದರ್ಶನ್‌ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನ ರಾಜ್ಯದ ವಿವಿದೆಡೆ ಶಿಫ್ಟ್‌ ಮಾಡಲಾಗಿತ್ತು.ಮೇಲಾಗಿ ಈ ಆರೋಪಿಗಳನ್ನ ಇಟ್ಟಿರುವ ಎಲ್ಲಾ ಜೈಲುಗಳಲ್ಲಿ ಬಿಗಿ ಕ್ರಮಗಳನ್ನ ಕೈಗೊಳ್ಳಲಾಗಿದೆ. ಇದರ ಪರಿಣಾಮವಾಗಿ ಉಳಿದ ಕೈದಿಗಳು ಇನ್ನಿಲ್ಲದ ಸಂಕಟ ಪಡುವಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕಾರವಾರ ಜೈಲಿನಲ್ಲಿ ತಂಬಾಕಿಗಾಗಿ ರಾದ್ದಾಂತ ನಡೆದಂತೆ, ಇವತ್ತು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಬೀಡಿಗಾಗಿ ಪ್ರತಿಭಟನೆ ನಡೆಸಿದ್ದಾರೆ. 

ಇದನ್ನೂ ಓದಿ : ಕೃಷಿ ಪ್ರಧಾನ ಜಿಲ್ಲೆಯ ರೈತರಿಗೆ ಕಳಪೆ ಬಿತ್ತನೆ ಬೀಜ ಪೂರೈಕೆ.?

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಪ್ರತಿಭಟನೆ :
778 ಕೈದಿಗಳು ಬೆಳಗ್ಗಿನ ಉಪಹಾರವನ್ನು ಸೇವಿಸಿದೇ ಪ್ರತಿಭಟನೆಯನ್ನ ನಡೆಸಿದ್ದಾರೆ. ಕಾರಾಗೃಹ ಇಲಾಖೆಯ ಬಿಗಿ ಕ್ರಮದಿಂದ ಜೈಲಿನಲ್ಲಿ ಬೀಡಿ ಸಿಗುತ್ತಿಲ್ಲ.ಆದರೆ ಬೀಡಿ ಸಿಗರೇಟಿನ ಚಟಕ್ಕೆ ಅಡಿಕ್ಟ್‌ ಆಗಿರುವ ಕೈದಿಗಳು ಅದರಿಂದ ಬಿಡಿಸಿಕೊಳ್ಳಲಾಗದೇ ಒದ್ದಾಡುತ್ತಿದ್ದಾರೆ.

ಇದೇ ಕಾರಣಕ್ಕೆ ಇವತ್ತು ಪ್ರತಿಭಟನೆ ನಡೆಸುತ್ತಿದ್ದಾರೆ.ಜೈಲಿನಲ್ಲಿ ಇವತ್ತು ಬೆಳಗಿನ ಉಪಾಹಾರವನ್ನು ತ್ಯಜಿಸಿರುವ ಕೈದಿಗಳು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳಿದ್ದಾರೆ. ಅವರ ಮನವೊಲಿಸುವ ಸಲುವಾಗಿ ಕಾರಾಗೃಹ ಇಲಾಖೆಯ ಅಧಿಕಾರಿಗಳ ತಂಡ ಪ್ರಯತ್ನ ನಡೆಸುತ್ತಿದೆ.ಆದರೆ ಅಧಿಕಾರಿಗಳ ಮಾತಿಗೆ ಕೈದಿಗಳು ಬಗ್ಗುವಂತೆ ಕಾಣುತ್ತಿಲ್ಲ. ಬೇಕೆಬೇಕು ಬೀಡಿಯಾದರೂ ಬೇಕು ಎಂದು ಪ್ರತಿಭಟನೆ ಮುಂದುವರಿಸಿದ್ದಾರೆ ಎಂದು ಹೇಳಲಾಗಿದೆ. 

ಇದನ್ನೂ ಓದಿ : ಕಾಡಿನಿಂದ ನಾಡಿಗೆ ಬಂದ ಚಿರತೆ

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇತ್ತೀಚೆಗೆಷ್ಟೆ ಶಿವಮೊಗ್ಗ ಎಸ್‌ಪಿ ಮಿಥುನ್‌ ಕುಮಾರ್‌ ನೇತೃತ್ವದ 100 ಕ್ಕೂ ಹೆಚ್ಚು ಪೊಲೀಸರ ತಂಡ ರೇಡ್‌ ನಡೆಸಿತ್ತು. ಈ ವೇಳೆ ಮ್ಯಾಚ್‌ ಬಾಕ್ಸ್‌ ಹಾಗೂ ಬಿಡಿಯ ಬಂಡಲ್‌ ಮತ್ತು ಚಾರ್ಜರ್‌ ವಯರ್‌ ಸಿಕ್ಕಿತ್ತು. ಈ ಬಗ್ಗೆ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌  ಸಹ ದಾಖಲಾಗಿತ್ತು. ಇದರ ಬೆನ್ನಲ್ಲೆ ಶಿವಮೊಗ್ಗ ಜೈಲಿಗೆ ದರ್ಶನ್‌ ಗ್ಯಾಂಗ್‌ನ ಇಬ್ಬರು ಆರೋಪಿಗಳು ಇನ್‌ ಆಗಿದ್ದರು. ನಂತರ ಜೈಲಿನಲ್ಲಿ ಇನ್ನಷ್ಟು ಬಂದೋಬಸ್ತ್‌ ಮಾಡಲಾಗಿತ್ತು. ಇವೆಲ್ಲದರ ಪರಿಣಾಮವಾಗಿ ಕೈದಿಗಳಿಗೆ ಬೀಡಿ ಸಿಗಂದತಾಗಿದೆ. ಇದರಿಂದ ಸಿಟ್ಟಿಗೆದ್ದಿರುವ ಕೈದಿಗಳು ಪ್ರತಿಭಟನೆಗೆ ಇಳಿದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

Trending News