ಸಂತ್ರಸ್ಥ ಕುಟುಂಬಕ್ಕೆ ಸರ್ಕಾರಿ ನೌಕರಿ ಭರವಸೆ ಕೊಟ್ಟ ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆಯ ನಡುವೆ ರಾಹುಲ್ ಗಾಂಧಿ ಗುಂಡ್ಲುಪೇಟೆ ಹೊರವಲಯದ ವೀರನಪುರ ಕ್ರಾಸಿನಲ್ಲಿ ಸೋಲಿಗರು ಮತ್ತು ಆಮ್ಲಜನಕ ದುರಂತ ಸಂತ್ರಸ್ತ ಕುಟುಂಬದ ಜೊತೆಗೆ ಸಂವಾದ ನಡೆಸಿದರು.

Written by - Zee Kannada News Desk | Last Updated : Sep 30, 2022, 09:42 PM IST
  • ಬಿಳಿಗಿರಿರಂಗನ ಬೆಟ್ಟದ ಮುತ್ತುಗದ್ದೆಪೋಡಿನ ವ್ಯಕ್ತಿಯೊಬ್ಬರು ರಾಗಾಗೆ ಶುದ್ಧ ಜೇನನ್ನು ನೀಡಿದರು.
  • ಬಳಿಕ, ಸಂವಾದದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಿರು ಅರಣ್ಯ ಉತ್ಪನ್ನ ಸಂಗ್ರಹಕ್ಕೆ ಅವಕಾಶ
ಸಂತ್ರಸ್ಥ ಕುಟುಂಬಕ್ಕೆ ಸರ್ಕಾರಿ ನೌಕರಿ ಭರವಸೆ ಕೊಟ್ಟ ರಾಹುಲ್ ಗಾಂಧಿ  title=

ಚಾಮರಾಜನಗರ: ಭಾರತ್ ಜೋಡೋ ಯಾತ್ರೆಯ ನಡುವೆ ರಾಹುಲ್ ಗಾಂಧಿ ಗುಂಡ್ಲುಪೇಟೆ ಹೊರವಲಯದ ವೀರನಪುರ ಕ್ರಾಸಿನಲ್ಲಿ ಸೋಲಿಗರು ಮತ್ತು ಆಮ್ಲಜನಕ ದುರಂತ ಸಂತ್ರಸ್ತ ಕುಟುಂಬದ ಜೊತೆಗೆ ಸಂವಾದ ನಡೆಸಿದರು.

ಬಿಳಿಗಿರಿರಂಗನ ಬೆಟ್ಟದ ಮುತ್ತುಗದ್ದೆಪೋಡಿನ ವ್ಯಕ್ತಿಯೊಬ್ಬರು ರಾಗಾಗೆ ಶುದ್ಧ ಜೇನನ್ನು ನೀಡಿದರು. ಬಳಿಕ, ಸಂವಾದದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಿರು ಅರಣ್ಯ ಉತ್ಪನ್ನ ಸಂಗ್ರಹಕ್ಕೆ ಅವಕಾಶ,  ಮಲೆಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಮಾಡಬಾರದೆಂದು ಸೋಲಿಗರು ಒತ್ತಾಯಿಸಿದರು ಇದಕ್ಕೆ ರಾಗಾ ಸಕಾರಾತ್ಮಕವಾಗಿ ಸ್ಪಂದಿಸಿದರು.

ಬಳಿಕ, ಆಮ್ಲಜನಕ ದುರಂತದ ಸಂತ್ರಸ್ತರು ಅಂದು ನಡೆದ ಕರುಣಾಜನಕ ಕಥೆಗಳನ್ನು ತೆರೆದಿಟ್ಟರು,  ಕೊರೊನಾದಿಂದಲೇ ಸತ್ತಿಲ್ಲ ಎಂದು ಸರ್ಕಾರ ಹೇಳುತ್ತಿದೆ ಇದು ಮೊದಲು ಸರಿಯಾಗಬೇಕು, ಮೃತಪಟ್ಟವರ ಕುಟುಂಬಕ್ಕೆ ಸರ್ಕಾರಿ ನೌಕರಿ ಕೊಡಬೇಕು ಎಂಬ ಸಂತ್ರಸ್ತರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಹುಲ್ ಗಾಂಧಿ ತಮ್ಮ ಸರ್ಕಾರ ಬಂದ ಕೂಡಲೇ ಮೊದಲ ಕೆಲಸ ಸಂತ್ರಸ್ತ ಕುಟುಂಬಗಳಿಗೆ ನೌಕರಿ ಕೊಡಿಸುವುದಾಗಿದೆ ಎಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News