ಬೆಂಗಳೂರು: ಎಐಸಿಸಿ ಮುಖಂಡ ರಾಹುಲ್ ಗಾಂಧಿ ರಾಜ್ಯ ಪ್ರವಾಸದ ಬಗ್ಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿವರಿಸಿದ್ದು, ಮಾರ್ಚ್ 31ರಂದು ಸಿದ್ದಗಂಗಾ ಶ್ರೀಗಳ ಗುರುವಂದನಾ ಕಾರ್ಯಕ್ರಮವಿದೆ, ಹಾಗಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದರು.


COMMERCIAL BREAK
SCROLL TO CONTINUE READING

ಮಧ್ಯಾಹ್ನ 3 ಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕಾರ ಮಾಡಲಿದ್ದಾರೆ.ನಂತರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಬಿಬಿಎಂಪಿ ಚುನಾವಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಡಿಕೆಶಿ ವಿವರಿಸಿದರು.


ಇದನ್ನೂ ಓದಿ: CT Ravi : ಹಲಾಲ್ ಅನ್ನೋದು ಒಂದು ಆರ್ಥಿಕ ಜಿಹಾದ್ : ಶಾಸಕ‌ ಸಿಟಿ ರವಿ 


ಏಪ್ರಿಲ್ 1 ರಂದು ಕಾಂಗ್ರೆಸ್ ಸಭೆ ನಡೆಯಲಿದ್ದು ರಾಹುಲ್ ಗಾಂಧಿ (Rahul Gandhi) ಭಾಗಿ ಆಗಲಿದ್ದಾರೆ.ಈ ಹಿಂದಿನ ಚುನಾವಣೆಗಳಲ್ಲಿ ಗೆದ್ದ-ಸೋತವರ ಜತೆ ಸಂವಾದ ನಡೆಸಲಿದ್ದಾರೆ.ನಂತರ ಜೂಮ್ ಮೂಲಕ ಕಾರ್ಯಕರ್ತರ ಜೊತೆ ಸಂವಾದ ನಡೆಸುವುದರ ಜೊತೆಗೆ ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಯಾರು ಆ್ಯಕ್ಟೀವ್ ಇದ್ದಾರೆ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ, ಈಗಾಗಲೇ 47 ಲಕ್ಷ ಸದಸ್ಯತ್ವ ಮಾಡಿದ್ದೇವೆ.ತೆಲಂಗಾಣದಲ್ಲಿ 40 ಲಕ್ಷ ಸದಸ್ಯತ್ವ ಆಗಿದೆ.


ಇದನ್ನೂ ಓದಿ: ಮುಸ್ಲಿಂ ಹಲಾಲ್ ವಿರುದ್ದ ಕಾಳಿ ಸ್ವಾಮಿ ಅಭಿಯಾನ, ಹಲಾಲ್ ಮಾಂಸ ಖರೀದಿಸದಂತೆ ಕರೆ


ರಾಷ್ಟ್ರಮಟ್ಟದ ಬ್ಲಾಕ್ ಎಲೆಕ್ಷನ್ ಕೂಡ ಆಗ್ತಿದೆ,ಹಾಗಾಗಿ ಸದಸ್ಯತ್ವ ಅಭಿಯಾನಕ್ಕೆ ಒತ್ತು ಕೊಟ್ಟಿದ್ದೇವೆ ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.