ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ ಹಲವಾರು ಜಿಲ್ಲೆಗಳಿಗೆ ಅಲರ್ಟ್‌ ಘೋಷಿಸಿದೆ.


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬೆಂಗಳೂರು ಸಿಟಿ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಹವಾಮಾನ ಇಲಾಖೆ 18 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದೆ. ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆ ಬಿಡದೇ ಸುರಿಯುತ್ತಿರೋ ಮಳೆ ರಾಜ್ಯದ ಜನರನ್ನ ಸಂಕಷ್ಟಕ್ಕೆ ದೂಡಿದೆ.


ಇದನ್ನೂ ಓದಿ: ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ : ಸಿಎಂ ಬೊಮ್ಮಾಯಿ


ರಾಯಚೂರು, ಬಳ್ಳಾರಿ, ಬೆಂಗಳೂರು ಸಿಟಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿಗೆ ಮಳೆ ಅಲರ್ಟ್ ನೀಡಲಾಗಿದೆ. ನಾಳೆ ದಕ್ಷಿಣ ಒಳನಾಡಿನ ಹಾಸನ ಕೊಡಗು ಭಾಗಕ್ಕೆ ರೆಡ್ ಅಲರ್ಟ್, ಚಿಕ್ಕಮಗಳೂರು ಮೈಸೂರು ಆರೆಂಜ್ ಅಲರ್ಟ್, ಮಂಡ್ಯ ಶಿವಮೊಗ್ಗ ಚಿತ್ರದುರ್ಗ ತುಮಕೂರು ಬಳ್ಳಾರಿ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.


ಇದನ್ನೂ ಓದಿ: ಉಮೇಶ್ ಕತ್ತಿ ನಿಧನ ಹಿನ್ನಲೆ ಮುಂದೂಡಿದ 'ಜನೋತ್ಸವ ಕಾರ್ಯಕ್ರಮ


ನಾಳೆ ಚಿಕ್ಕಮಗಳೂರು ಕೊಡಗು ಜಿಲ್ಲೆಗೆ ಆರೆಂಜ್, ಬಳ್ಳಾರಿ ಚಿತ್ರದುರ್ಗ ದಾವಣಗೆರೆ ಹಾಸನಕ್ಕೆ ಯಲ್ಲೊ ಅಲರ್ಟ್. ಮೂರನೇ ದಿನ ಚಿಕ್ಕಮಗಳೂರು ಕೊಡಗು ಆರೆಂಜ್, ಬಳ್ಳಾರಿ ಚಿತ್ರದುರ್ಗ ಶಿವಮೊಗ್ಗ ಯಲ್ಲೊ ಅಲರ್ಟ್, ನಾಲ್ಕನೇ ದಿನ ಪಶ್ಚಿಮ ಘಟ್ಟದ ಜಿಲ್ಲೆಗಳು ಶಿವಮೊಗ್ಗ ಚಿಕ್ಕಮಗಳೂರು ಕೊಡಗು ಹಾಸನಕ್ಕೆ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಈಶಾನ್ಯ ಹಾಗು ಪೂರ್ವ ಮಧ್ಯ ಬಂಗಾಳಕೊಲ್ಲಿಯಲ್ಲಿ ಸಮುದ್ರ ಮಟ್ಟದಲ್ಲಿ 5.8 ಕಿಮೀ ಎತ್ತರದವರೆಗೂ ಮೇಲ್ಮೈ ಸುಳಿಗಾಳಿ ಹಿನ್ನಲೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.