ಬೆಂಗಳೂರು: ರಾಜ್ಯ ಸಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿಯೊಂದು ಬಿಡುಗಡೆಯಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಎದ್ದಿದೆ. ಇದಿನ್ನೂ ಟ್ರೈಲರ್​ ಅಷ್ಟೇ, ಸದ್ಯದಲ್ಲೇ ಇನ್ನಿಬ್ಬರು ಸಚಿವರ ಸಿಡಿ ಬಿಡುಗಡೆಯಾಗಲಿದೆ ಎನ್ನುವ ಚರ್ಚೆಯೂ ಆರಂಭವಾಗಿದೆ.


COMMERCIAL BREAK
SCROLL TO CONTINUE READING

ಇನ್ನಿಬ್ಬರು ಸಚಿವರ ಸಿಡಿ ಬಿಡುಗಡೆಯಾಗುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್(Congress)​ ಮತ್ತು ಬಿಜೆಪಿ ಪಕ್ಷಗಳೆರೆಡೂ ಈ ರೀತಿ ಚರ್ಚೆ ನಡೆಸುತ್ತಿವೆ. ಹಳೇ ಮೈಸೂರು ಭಾಗದ ಒಬ್ಬರು ಮತ್ತು ಉತ್ತರ ಕರ್ನಾಟಕ ಭಾಗದ ಒಬ್ಬ ಸಚಿವರ ಸಿಡಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಯಾವಾಗ ಆ ಸಿಡಿಗಳು ಬಿಡುಗಡೆಯಾಗಲಿವೆ ಎನ್ನುವುದರ ಬಗ್ಗೆ ಕುತೂಹಲವಿದ್ದು, ಭಾರೀ ಚರ್ಚೆ ನಡೆಯುತ್ತಿದೆ.


Madhu Bangarappa: ಜೆಡಿಎಸ್‌ ತೊರೆಯುವ ಸುಳಿವು ನೀಡಿದ ಮಧು ಬಂಗಾರಪ್ಪ..!?


ನಾಳೆ ರಾಜ್ಯ ಸಚಿವ ಸಂಪುಟದ ಸಭೆಯಿದ್ದು, ಅದರ ಹಿಂದಿನ ದಿನವೇ ಒಂದು ಮಹತ್ವದ ಬೆಳವಣಿಗೆ ರಾಜ್ಯದಲ್ಲಾಗಿದೆ. ಸಚಿವ ರಮೇಶ್​ ಜಾರಕಿಹೊಳಿ(Ramesh Jarkiholi) ಅವರು ಸಭೆಗೆ ಬರಲಿದ್ದಾರೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ. ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ಸಚಿವರ ಅಭಿಪ್ರಾಯ ಪಡೆಯಲಿದ್ದಾರೆ ಎನ್ನಲಾಗಿದೆ.


ಮನೆಯಲ್ಲಿಯೇ Corona Vaccine ಪಡೆದು ವಿವಾದಕ್ಕೆ ಗುರಿಯಾದ ಸಚಿವ BC Patil


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.