ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಅಕ್ರಮದ ಹೊಣೆಹೊತ್ತು ಸಿಎಂ ಬಸವರಾಜ ಬೊಮ್ಮಾಯಿಯವರು ಕೂಡಲೇ ರಾಜೀನಾಮೆ ನೀಡಬೇಕೆಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

‘ಚಿಲುಮೆ ಎಜುಕೇಶನ್ ಇನ್ಸ್‌ಟಿಟ್ಯೂಟ್ ಎಂಬ ಸಂಸ್ಥೆಯ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳ್ಳತನ ನಡೆದಿದೆ. ಈ ಅಕ್ರಮಕ್ಕೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಸಿಎಂ ಬೊಮ್ಮಾಯಿಯವರೇ ನೇರ ಹೊಣೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಈಗ ಚುನಾವಣಾ ಪ್ರಕ್ರಿಯೆಗೂ ವಿಸ್ತರಿಸಿದೆ!’ ಎಂದು ಕಿಡಿಕಾರಿದ್ದಾರೆ.


ಮತದಾರರ ಜಾಗೃತಿ ಹೆಸರಲ್ಲಿ ಬಿಜೆಪಿಯಿಂದ ಡಾಟಾ ಕಳ್ಳತನ: ಕಾಂಗ್ರೆಸ್ ಗಂಭೀರ ಆರೋಪ


‘ಇದು ಅಕ್ರಮದ ಮೂಲಕ ಮತದಾರರ ಸಂವಿಧಾನ ದತ್ತ ಮತದಾನದ ಹಕ್ಕು ಕಸಿಯುವ ಪ್ರಯತ್ನ. ಇದರ ಜವಾಬ್ದಾರಿ ಸಿಎಂ ಬೊಮ್ಮಾಯಿಯವರ ಮೇಲಿದ್ದು, ಅವರು ಈ ಅಕ್ರಮದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಕೂಡಲೇ ಸಿಎಂ ಬೊಮ್ಮಾಯಿಯವರ ವಿರುದ್ಧ ಎಫ್ಐಆರ್ ದಾಖಲಿಸಿ, ಅವರನ್ನು ಬಂಧಿಸಬೇಕು’ ಎಂದು ಸುರ್ಜೇವಾಲಾ ಒತ್ತಾಯಿಸಿದ್ದಾರೆ.


ಕಾಂಗ್ರೆಸ್ ಪಕ್ಷದವರು ಹತಾಶರಾಗಿದ್ದಾರೆ : ಸಿಎಂ ಬೊಮ್ಮಾಯಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.