ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರರ ಸ್ವಗ್ರಾಮ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ಪತಿ ಎದುರೇ ದಲಿತ ಮಹಿಳೆಯನ್ನ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ ಕಾರಿದ್ದಾರೆ.


COMMERCIAL BREAK
SCROLL TO CONTINUE READING

ಘಟನೆ ನಡೆದು 2 ದಿನಗಳಾದರೂ ಪೊಲೀಸರು ಪ್ರಕರಣ ದಾಖಲಿಸಲು ವಿಳಂಬ ಮಾಡಿರುವುದು ಯಾಕೆ? ಘಟನೆಯಲ್ಲಿ ಸಂತ್ರಸ್ತೆಯ ಪತಿಯ ಮೇಲೂ ದುಷ್ಕ್ರರ್ಮಿಗಳು ಹಲ್ಲೆ ನಡೆಸಿದ್ದಾರೆ. ಸಂಪತ್, ಆದರ್ಶ ಹಾಗೂ ಇನ್ನಿಬ್ಬರು ಯುವಕರಿಬ್ಬರು ಬೈಕ್ ಮೇಲೆ ಬಂದು ದುಷ್ಕ್ರತ್ಯ ಎಸೆಗಿದ್ದಾರೆಂದು ಸಂತ್ರಸ್ತರೇ ಗುರುತಿಸಿರುವಾಗ ಇಲ್ಲಿವರೆಗೂ ಪೊಲೀಸರು ಬಂಧಿಸದಿರುವುದಕ್ಕೆ ಕಾರಣವೇನು? ಎಂದು ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘ಗೃಹ ಸಚಿವ ಆರಗ ಜ್ಞಾನೇಂದ್ರ ಗಾಂಜಾ ಸೇವಿಸುತ್ತಾರೆ!’


ಸ್ವಗ್ರಾಮದಲ್ಲೇ ನಡೆದಿರುವ ಅಮಾನವೀಯ ಘಟನೆ ಇಲ್ಲಿವರೆಗೆ ಗೃಹ ಸಚಿವರ ಗಮನಕ್ಕೇ ಬಂದಿಲ್ಲವೇ? ಅಪಘಾತದಲ್ಲಿ ಗಲಾಟೆಯಾಗಿ ಯುವಕನ ಕೊಲೆ ಎರಡೇ ನಿಮಿಷಕ್ಕೆ ಮಾಹಿತಿ ಸಿಗುತ್ತೆ. ದಲಿತರ ಮೇಲೆ ನಡೆಯುವ ದೌರ್ಜನ್ಯಗಳಿಗೆ ನಿಮ್ಮ "ಮಾಹಿತಿಯ ಮೂಲ" ಇನ್ನೂ ಮಾಹಿತಿಯೇ ನೀಡಿಲ್ಲವೇ? ಅಥವಾ ಸ್ಥಳೀಯ ದಲಿತ ಸಂಘರ್ಷ ಸಮಿತಿಯ ಮುಖಂಡರ ಆರೋಪದಂತೆ ಪ್ರಕರಣ ಮುಚ್ಚಿ ಹಾಕುವ ಯತ್ನವೇ? ಎಂದು ಅವರು ಕಿಡಿ ಕಾರಿದರು.ಕಾಂಗ್ರೆಸ್ ವಿರೋಧಿ ಬಿಜೆಪಿ ಅಲ್ಲ, ಆರ್ ಎಸ್ ಎಸ್..! -ಬಿ.ಕೆ. ಹರಿಪ್ರಸಾದ್


ದುಷ್ಕ್ರರ್ಮಿಗಳ ಅಟ್ಟಹಾಸವನ್ನ ಮಟ್ಟ ಹಾಕಬೇಕಿದೆ. ಸಂತ್ರಸ್ತರ ಶೋಷಿತ ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೂಡಲೇ ಆರೋಪಿಗಳನ್ನ ಬಂಧಿಸಬೇಕು. ಸಂತ್ರಸ್ತೆ ಹಾಗೂ ಕುಟುಂಬಸ್ಥರಿಗೆ ರಕ್ಷಣೆ ನೀಡಬೇಕು. ಹಾಗೂ ಮಹಿಳಾ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡು ಮಹಿಳೆ ರಕ್ಷಣೆಗೆ ಧಾವಿಸಬೇಕೆಂದು ಅವರು ಆಗ್ರಹಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.