ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ನಿನ್ನೆಯಷ್ಟೇ ಮಧ್ಯಂತರ ಜಾಮೀನು ಪಡೆದಿದ್ದ ಪತ್ರಕರ್ತ ರವಿ ಬೆಳಗೆರೆ ಇಂದು ಬೆಳಿಗ್ಗೆ ನಗರದ ಜಯದೇವ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿದ್ದಾರೆ.


COMMERCIAL BREAK
SCROLL TO CONTINUE READING

ಬೆಳಗಿನ ಉಪಹಾರದ ನಂತರ ರವಿ ಬೆಳಗೆರೆ ಅವರ ಶುಗರ್ ಲೆವೆಲ್ ತೀವ್ರವಾಗಿತ್ತು, ನಿರಂತರ ಏರಿಳಿತವಾಗುತ್ತಿರುವ ಶುಗರ್ ಲೆವೆಲ್ ನಿಂದಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಹೃದಯ ಸಂಬಂಧಿ ತೊಂದರೆ ಇರುವುದರಿಂದ ಅವರಿಗೆ ಹೃದಯ ಸಂಬಂಧ ಪಟ್ಟ ತಪಾಸಣೆ ಮಾಡುವ ಸಾಧ್ಯತೆ ಇದೆ. 


ಬುಧವಾರ ರವಿ ಬೆಳಗೆರೆಗೆ ಮಧ್ಯಂತರ ಜಾಮೀನು ಸಿಕ್ಕಿದೆಯಾದರೂ, ಅವರ ಬಿಡುಗಡೆ ಪ್ರಕ್ರಿಯೆಗಳು ಇನ್ನೂ ಪೂರ್ಣಗೊಂಡಿಲ್ಲ. ಇಂದು ಬಿಡುಗಡೆ ಪ್ರಕ್ರಿಯೆ ಕೂಡ ಬಹುತೇಕ ಪೂರ್ಣಗೊಳ್ಳುವ ಸಾಧ್ಯತೆ ಇದೆ.