ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ: 'ಮಹಾ' ಸರ್ಕಾರಕ್ಕೆ ಪತ್ರ

ಬೆಂಗಳೂರು: ಈ ಹಿಂದೆಯೂ ಕೇರಳ‌ ಸರ್ಕಾರ ಇದೇ ರೀತಿ ಕಾಸರಗೋಡಿನಲ್ಲಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಂ ಭಾಷೆಯ ಶಿಕ್ಷಕರನ್ನು ನೇಮಿಸಿತ್ತು. ನಮ್ಮ ಮಧ್ಯ ಪ್ರವೇಶದ ಬಳಿಕ ಕೇರಳ ಸರ್ಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಇದೀಗ ಮಹಾರಾಷ್ಟ್ರದ ಶಿಕ್ಷಣ ಸಚಿವ‌ರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ ಎಂದರು.

Written by - Prashobh Devanahalli | Last Updated : Jun 21, 2024, 06:13 PM IST
    • ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ
    • ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ
    • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ
ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ: 'ಮಹಾ' ಸರ್ಕಾರಕ್ಕೆ ಪತ್ರ title=
File Photo

ಬೆಂಗಳೂರು: ಗಡಿ ಭಾಗವಾದ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.

ಇದನ್ನೂ ಓದಿ: ಇನ್ಮುಂದೆ ಹೊಸ ಕಾನೂನು ಮಾಡೋಣ..! ಸಂಚಲನ ಮೂಡಿಸುತ್ತಿದೆ ನಟ ಸೂರ್ಯ ಹೇಳಿಕೆ

ಈ ಹಿಂದೆಯೂ ಕೇರಳ‌ ಸರ್ಕಾರ ಇದೇ ರೀತಿ ಕಾಸರಗೋಡಿನಲ್ಲಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಂ ಭಾಷೆಯ ಶಿಕ್ಷಕರನ್ನು ನೇಮಿಸಿತ್ತು. ನಮ್ಮ ಮಧ್ಯ ಪ್ರವೇಶದ ಬಳಿಕ ಕೇರಳ ಸರ್ಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಇದೀಗ ಮಹಾರಾಷ್ಟ್ರದ ಶಿಕ್ಷಣ ಸಚಿವ‌ರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ ಎಂದರು.

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕಡ್ಡಾಯವಾಗಿ ಕನ್ನಡ ಭಾಷಾ ಮಾಧ್ಯಮದಲ್ಲಿ‌ ಪಾಠ ಮಾಡುವ ಶಿಕ್ಷಕರನ್ನೇ ಕನ್ನಡ ಮಾಧ್ಯಮ ಶಾಲೆಗಳಿಗೆ ಮಹಾರಾಷ್ಟ್ರ ಸರ್ಕಾರ ನೇಮಿಸಬೇಕು. ಹೀಗಾಗಲೇ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ನಡೆಸಿದ್ದೇನೆ. ಗಡಿಭಾಗದಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆ ಉಳಿವಿಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದರು.‌

ಇದನ್ನೂ ಓದಿ: ಅಫ್ಘನ್ ವಿರುದ್ಧ ಗೆಲುವಿನ ಸಂಪೂರ್ಣ ಕ್ರೆಡಿಟ್ ಈ ಇಬ್ಬರಿಸಿಗೆ ಸಲ್ಲಿಸಿದ ರೋಹಿತ್ ಶರ್ಮಾ

ವಿಶ್ವ‌ ಸಮ್ಮೇಳನ‌ದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಿಶ್ವ ಸಮ್ಮೇಳನ ನಡೆಸುವ ಬಗ್ಗೆ ನಮಗೂ ಇರಾದೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News