Dr Arun Yogiraj : ಅಮೇರಿಕಾದ ಸಿಯಾಟಲ್ ನಗರದಲ್ಲಿನ ಸಹ್ಯಾದ್ರಿ ಕನ್ನಡ ಸಂಘ ನೀಡುವ, ಪ್ರತಿಷ್ಠಿತ ವಿಶ್ವ ಶ್ರೇಷ್ಠ ಕನ್ನಡಿಗ 2024ನೇ ಸಾಲಿನ ಪ್ರಶಸ್ತಿಗೆ ಹೆಮ್ಮೆಯ ಕನ್ನಡಿಗ ಖ್ಯಾತ ಶಿಲ್ಪಿ ಆಯೋಧ್ಯಾ ಶ್ರೀರಾಮ ವಿಗ್ರಹದ ನಿರ್ಮಾತೃ ಡಾ. ಅರುಣ್ ಯೋಗಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಇಂದು ಸಿಯಾಟಲ್ ನಗರದಲ್ಲಿ ಸಹ್ಯಾದ್ರಿ ಕನ್ನಡ ಸಂಘದ ಪದಾಧಿಕಾರಿಗಳ ಸಭೆಯಲ್ಲಿ, ಸಂಘದ ಚೇರ್ಮನ್ ಮನು ಗೊರೂರು ಅವರು ಈ ವಿಷಯವನ್ನು ಪ್ರಕಟಿಸಿದರು ಹಾಗೂ ಸೆಪ್ಟೆಂಬರ್ 7ರಂದು ಸಿಯಾಟಲ್‌ನ ಬೆನಾರೋಯಾ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.


ಇದನ್ನೂ ಓದಿ: ಇಂದು ದೆಹಲಿ ಸಿಎಂ ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ


ಡಾ. ಅರುಣ್ ಯೋಗಿರಾಜ್ ಅವರು ಶ್ರೀರಾಮ ವಿಗ್ರಹವನ್ನು ಮಾತ್ರವಲ್ಲದೆ ಹಲವಾರು ಶಿಲ್ಪ ಕಲಾಕೃತಿಗಳನ್ನು ರಚಿಸಿದ್ದಾರೆ. ಕಳೆದ ವರ್ಷ ಈ ಪ್ರಶಸ್ತಿಯನ್ನು ಖ್ಯಾತ ನಟ ಹಾಗು ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಗಿತ್ತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಸುಷ್ಮಾ ಪ್ರವೀಣ್, ಪಧಾದಿಕಾರಿಗಳಾದ ಆದರ್ಶ, ಅರುಣ್, ಆಶ್ವಿನ್, ಚೇತನ, ವಿಜಯ ಬ್ಯಾಡಗಿ, ಜಗನ್ ಕುಮಾರ್ ಹಾಗೂ ತೃಪ್ತಿ ಮನು ಅವರು ಉಪಸ್ಥಿತರಿದ್ದರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.