"ಬಾಬ್ರಿ ಮಸೀದಿ ರೀತಿ ಶ್ರೀರಂಗಪಟ್ಟಣದ ಮಸೀದಿ ಒಡೆಯಬೇಕು" ಎಂದ ಕಾಳಿ ಸ್ವಾಮೀಜಿ ಬಂಧನ

Rishikumar Swamiji arrest: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರಿನ ಕಾಳಿಮಠದಲ್ಲಿ ರಿಷಿಕುಮಾರ್ ಸ್ವಾಮೀಜಿ  ಅವರನ್ನು ಪೊಲೀಸರು ಬಂಧಿಸಿದ್ದಾರೆ. 

Edited by - Zee Kannada News Desk | Last Updated : Jan 18, 2022, 12:21 PM IST
  • "ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಒಡೆಯಬೇಕು"
  • ಕಾಳಿ‌ಮಠದ ರಿಷಿಕುಮಾರ್ ಸ್ವಾಮೀಜಿ ಹೇಳಿಕೆ
  • ಶ್ರೀರಂಗಪಟ್ಟಣ ಪೊಲೀಸರಿಂದ ಬಂಧಿನ
"ಬಾಬ್ರಿ ಮಸೀದಿ ರೀತಿ ಶ್ರೀರಂಗಪಟ್ಟಣದ ಮಸೀದಿ ಒಡೆಯಬೇಕು" ಎಂದ ಕಾಳಿ ಸ್ವಾಮೀಜಿ ಬಂಧನ  title=
ಕಾಳಿ‌ಮಠದ ರಿಷಿಕುಮಾರ್ ಸ್ವಾಮೀಜಿ

ಮಂಡ್ಯ: "ಬಾಬ್ರಿ ಮಸೀದಿ (Babri Masjid) ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಒಡೆಯಬೇಕು" ಎಂದು ಹೇಳಿದ್ದ ಕಾಳಿ‌ಮಠದ ರಿಷಿಕುಮಾರ್ ಸ್ವಾಮೀಜಿ (Rishikumar Swamiji arrest) ಅವರನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ದಾರೆ. 

ಶ್ರೀರಂಗಪಟ್ಟಣದ ಮಸೀದಿ ಮುಂದೆ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು.  ಈ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರಿನ ಕಾಳಿಮಠದಲ್ಲಿ ಸ್ವಾಮೀಜಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. 

ವಿಡಿಯೋದಲ್ಲಿ ರಿಷಿಕುಮಾರ್ ಸ್ವಾಮೀಜಿ  ಹೇಳಿದ್ದೇನು?

"ಬಾಬ್ರಿ‌ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ (Srirangapatna Masjid) ಒಡೆಯಬೇಕು. ಈ‌ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿದೆ. ಅದು ದೇವಸ್ಥಾನದ ಕಟ್ಟಡವಾಗಿದೆ. ಶ್ರೀರಂಗಪಟ್ಟಣದ ದೇವಾಸ್ಥಾನವನ್ನ ಮಸೀದಿ‌ ಮಾಡಿಕೊಂಡಿದ್ದಾರೆ. ಹಿಂದೂಗಳು ಜಾಗರೂಕರಾಗಿ. ಅತಿಬೇಗ ಒಡೆಯಬೇಕಾದ ಮಸೀದಿ ಇದು" ಎಂದು ರಿಷಿಕುಮಾರ್ ಸ್ವಾಮೀಜಿ (Rishikumar Swamiji) ಹೇಳಿದ್ದರು. 

ಮುಸ್ಲಿಂ ಮುಖಂಡರು ಆರೋಪ:

ಕೆಲ ದಿನಗಳ ಹಿಂದೆ‌ ಮಸೀದಿ ಒಡೆಯುತ್ತಾರೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಬಾಬ್ರಿ ಮಸೀದಿ ರೀತಿ ಶ್ರೀರಂಗಪಟ್ಟಣ ಮಸೀದಿ ಕೆಡವಬೇಕು ಎಂದು ರಿಷಿಕುಮಾರ್ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. 

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಚಿಕ್ಕಮಗಳೂರಿನ ಮಠದಲ್ಲಿ ಸ್ವಾಮೀಜಿ ಅವರನ್ನು ಬಂಧಿಸಲಾಗಿದ್ದು, ಶ್ರೀರಂಗಪಟ್ಟಣ ಠಾಣೆಗೆ ಕರೆ ತಂದಿದ್ದಾರೆ.

ಇದನ್ನೂ ಓದಿ: 13 ಜನ ಯುವಕರ ತಂಡದಿಂದ ಅಪ್ಪು ಸಮಾಧಿಗೆ ಸೈಕಲ್ ಯಾತ್ರೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News