ಮಂಗಳೂರು ಬೈಕ್ ರ್ಯಾಲಿ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಾಡಿದ ಆರ್.ಕೆ ದತ್ತಾ

ರ್ಯಾಲಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸಿಎಂ ಸೂಚನೆ

Last Updated : Sep 5, 2017, 12:29 PM IST
ಮಂಗಳೂರು ಬೈಕ್ ರ್ಯಾಲಿ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಾಡಿದ ಆರ್.ಕೆ ದತ್ತಾ  title=

ಬೆಂಗಳೂರು: ಬಿಜೆಪಿ ಯುವ ಮೋರ್ಚ ಕೈಗೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿ ಅಂಗವಾಗಿ ಪೋಲಿಸ್ ಮಹಾನಿರ್ದೇಶಕ ಆರ್.ಕೆ ದತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಪೋಲೀಸ್ ಮಹಾನಿರ್ದೇಶಕ ರೂಪ್ ಕುಮಾರ್ ದತ್ತಾ  ಭೇಟಿ ಮಾಡಿದ್ದಾರೆ. ಮಂಗಳೂರು ಬೈಕ್ ರ್ಯಾಲಿಯಲ್ಲಿ ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಬಗ್ಗೆ ವಿವರಣೆ ಪಡೆದಿರುವ ಸಿಎಂ ರ್ಯಾಲಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸಿಎಂ ಸೂಚಿಸಿದ್ದಾರೆ.

Trending News