ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಜನ ಭೆಚ್ಚಿ ಬಿದ್ದಿದ್ದಾರೆ. ಹಾಡಹಗಲೇ ನಡುರಸ್ತೆಯಲ್ಲಿ ಕುಕ್ಯಾತ ರೌಡಿ ಲಕ್ಷ್ಮಣ್ ನನ್ನು ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನ 12.45ರಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಯಶವಂತಪುರದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಬಳಿ ಎದುರಾಳಿ ಗುಂಪಿನವರು ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಲಕ್ಷ್ಮಣ್ ನನ್ನು ಹತ್ಯೆ ಮಾಡಿದ್ದು, ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಕೆಂಗೇರಿ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿ ಮೃತ ಲಕ್ಷ್ಮಣ್​​ ಹೆಸರಿತ್ತು. ಕೊಲೆ, ಕೊಲೆ, ಯತ್ನ, ಬೆದರಿಕೆ ಸೇರಿ ಲಕ್ಷ್ಮಣನ ವಿರುದ್ಧ ಹತ್ತಕ್ಕೂ ಹೆಚ್ಚು ಪ್ರಕರಣಗಳಿದ್ದವು.  ಅಷ್ಟೇ ಅಲ್ಲದೆ, ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಿಸಿಬಿ ರೌಡಿ ಪರೇಡ್​ಗೆ ಹಾಜರಾಗಿದ್ದ ಲಕ್ಷ್ಮಣ್​ನ ವಿಚಾರಣೆ ನಡೆಸಿದ್ದ ಸಿಸಿಬಿ ಅಧಿಕಾರಿಗಳು ರೌಡಿಸಂ ಬಿಟ್ಟು ಉತ್ತಮ ರೀತಿಯಲ್ಲಿ ಜೀವನ ನಡೆಸುವಂತೆ ಎಚ್ಚರಿಕೆಯನ್ನೂ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.