ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ.


COMMERCIAL BREAK
SCROLL TO CONTINUE READING

ಪ್ರಕರಣದ ಜಾಡು ಹಿಡಿದು ಹೊರಟಿದ್ದ ಸಿಸಿಬಿ, ಕಬ್ಬನ್ ಪಾರ್ಕ್ ಪೊಲೀಸರಿಗೆ ಸಾಮಾಜಿಕ ಕಾರ್ಯಕರ್ತ ದೂರುದಾರ ದಿನೇಶ್ ಕಲ್ಲಹಳ್ಳಿ(Dinesh Kallahalli) ಅವರಿಗೆ ರಾಸಲೀಲೆ ಸಿಡಿ ಯಾವ ಸ್ಥಳದಿಂದ ಲಭ್ಯವಾಗಿತ್ತು ಎಂಬ ಮಾಹಿತಿ ಲಭಿಸಿದೆ.


BIG NEWS: PHS, ಸಮುದಾಯ ಆರೋಗ್ಯ ಕೇಂದ್ರದಲ್ಲೂ ಸಿಗಲಿದೆ 'ಕೋವಿಡ್ ಲಸಿಕೆ'!


ಸಿಡಿ ಬಿಡುಗಡೆಗೂ ಮುನ್ನ ಮಾ.1ರಂದು ಬೆಂಗಳೂರಿನ ಗಾಂಧಿನಗರದಲ್ಲಿರುವ ರಾಮಕೃಷ್ಣ ಲಾಡ್ಜ್​(Lodge) ನಲ್ಲಿ ದಿನೇಶ್ ಕಲ್ಲಹಳ್ಳಿ, ಸಂತ್ರಸ್ತೆ ಕುಟುಂಬದ ಸ್ನೇಹಿತನನ್ನು ಭೇಟಿ ಮಾಡಿದ್ದರು. ಆ ಸ್ಥಳದಲ್ಲೇ ವ್ಯಕ್ತಿ ಓರ್ವನಿಂದ ದಿನೇಶ್ ಸಿಡಿ ಪಡೆದಿದ್ದರಂತೆ.


Cabinet Minister: ಟೀಂ ಲೀಡರ್ ರಾಜೀನಾಮೆ: ಸಿಎಂ ಮನೆಗೆ ಎಂಟ್ರಿ ನೀಡಿದ ಮಿತ್ರಮಂಡಳಿ!


ಬುಧವಾರ ಸಂಜೆ ರಾಮಕೃಷ್ಣ ಲಾಡ್ಜ್​ಗೆ ಪೊಲೀಸ(Police)ರು ಭೇಟಿ ನೀಡಿ, ಲಾಡ್ಜ್​ನಲ್ಲಿದ್ದ ಸಿಸಿ ಕ್ಯಾಮೆರಾ, ಡಿವಿಆರ್ ವಶಕ್ಕೆ ಪಡೆದಿದ್ದಾರೆ.


Karnataka Congress: 'ಕಮಲಕ್ಕೆ ಹಾರಿ ಬಂದ 15 ಶಾಸಕರಿಗೆ ಬಿಜೆಪಿ ರಾಜಕೀಯ ಸಮಾಧಿ'


ದಿನೇಶ್ ಕಲ್ಲಹಳ್ಳಿ ಭೇಟಿ ಮಾಡಿದ್ದ ವ್ಯಕ್ತಿ ಹಾಗೂ ಅವರಿಬ್ಬರು ಮಾತನಾಡುತ್ತಿರುವ ದೃಶ್ಯಾವಳಿ(Video)ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Ramesh Jarkiholi: ರಮೇಶ್‌ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು!


ದಿನೇಶ್​ ಕಲ್ಲಹಳ್ಳಿಗೆ ಸಿಡಿ(CD) ಪಡೆದುಕೊಂಡಿದ್ದ ದಿನದಂದು ಲಾಡ್ಜ್​ನಲ್ಲಿ ಕರ್ತವ್ಯದಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದು, ದೃಶ್ಯಾವಳಿಗಳನ್ನು ಬೇರೆ ಯಾರಿಗೂ ನೀಡದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.


ST Somashekhar: 22 ಲಕ್ಷ ರೈತರಿಗೆ ₹ 14 ಸಾವಿರ ಕೋಟಿ ಸಾಲ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.