ಬೆಂಗಳೂರು: ದಿವಂಗತ ಎಸ್. ಆರ್. ಬೊಮ್ಮಾಯಿಯವರು  ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆಯನ್ನಾಗಿ  ಮಾಡಿ ಯಶಸ್ವಿಯಾದರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 


COMMERCIAL BREAK
SCROLL TO CONTINUE READING

ಇಂದು ಶ್ರೀಮತಿ ಗಂಗಮ್ಮಾ ಸೋಮಪ್ಪ ಬೊಮ್ಮಾಯಿ ಎಜುಕೇಶನಲ್ ಮತ್ತು ವೆಲ್ ಪೇರ್ ಫೌಂಡೇಶನ್ ವತಿಯಿಂದ ಗಾಂಧಿಭವನದಲ್ಲಿ ಏರ್ಪಡಿಸಿದ್ದ ಹಿರಿಯ ಮುತ್ಸದ್ದಿ ದಿ. ಎಸ್.ಆರ್. ಬೊಮ್ಮಾಯಿಯವರ ಜನ್ಮ ಶತಮಾನೋತ್ಸವ ಆಚರಣೆ, ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್ ಆರ್ ಬೊಮ್ಮಾಯಿಯವರು  ವಿದ್ಯಾರ್ಥಿಯಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದರು . ಕರ್ನಾಟಕ ಏಕೀಕರಣ, ಚಲೆ ಜಾವ್ ಚಳುವಳಿ, ಗೇಣಿದಾರರ ಪರ ಹೋರಾಟ‌ಮಾಡಿದ್ದರು.


ಜನರ ಅಧಿಕಾರವನ್ನು ಜನರಿಗೆ ವಹಿಸುವ ತೀರ್ಮಾನ ಐತಿಹಾಸಿಕವಾಗಿದೆ. ಕಡಿಮೆ ಅವಧಿ ಅಧಿಕಾರ ನಡೆಸಿದರೂ ಅವರು ತೆಗೆದುಕೊಂಡ ತೀರ್ಮಾಣ ಐತಿಹಾಸಿಕವಾಗಿವೆ. ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಅವರ  ತಂದೆಯ ರೀತಿ ಅಧಿಕಾರ ನಡೆಸಿ, ನೀರಾವರಿ ಸಚಿವರಾಗಿ ರಾಜ್ಯದ ಹಿತಕ್ಕೆ ಧಕ್ಕೆ ಬಾರದಂತೆ ನಡೆದು ಕೊಂಡಿದ್ದಾರೆ. ಜನ ನಾಯಕರಾಗಿ ಬೊಮ್ಮಾಯಿಯವರು ತೆಗೆದುಕೊಂಡ ತೀರ್ಮಾನವನ್ನು ರಾಜ್ಯದ ಜನತೆ ಎಂದಿಗೂ‌ ಮರೆಯುವುದಿಲ್ಲ ಎಂದು ಹೇಳಿದರು. 


ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಎಸ್. ಆರ್. ಬೊಮ್ಮಾಯಿ ಅವರ ಕುರಿತ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ,  ಎಸ್. ಆರ್. ಬೊಮ್ಮಾಯಿಯವರು ರಾಜಕಾರಣ ಮಾಡುವ ಕಾಲಘಟ್ಟ ಹಿಂತಿರುಗಿ ನೋಡಿದಾಗ ಅವರು ಮಾಡಿದ ಹೋರಾಟ ಅವರ ಪರವಾಗಿ ಆಗಿದ್ದು ಒಂದು ವಿಸ್ಮಯ ಎಂದರು. 


ಅಲ್ಲಿಯವರೆಗೂ ರಾಜ್ಯಪಾಲರು ಎಲ್ಲ ವಿಧವಾದ ಆಟವಾಡುತ್ತಿದ್ದರು. ನಾನು ಅನೇಕ ಉದಾಹರಣೆಗಳನ್ನು ಪ್ರತ್ಯಕ್ಷವಾಗಿ ನೋಡಿದ್ದೇನೆ. ಬೂಟಾ ಸಿಂಗ್ ಅವರು ಶಾಸಕರನ್ನು ರಾಜಭವನದಲ್ಲಿ ಕರೆದುಕೊಂಡು ಮಲಗಿದ ಉದಾಹರಣೆ ನೋಡಿದ್ದೇನೆ. ಆದರೂ ಬೊಮ್ಮಾಯಿಯವರು ದೃತಿಗೆಡದೇ ಸುಪ್ರೀಂಕೋರ್ಟ್ ವರೆಗೆ ತೆಗೆದುಕೊಂಡು ಹೊಗಿ ಜಯ ಗಳಿಸಿದ್ದು ಐತಿಹಾಸಿಕ ಕ್ಷಣ. ಕೆಲವು ರಾಜ್ಯಪಾಲರು ಅಧಿಕಾರ ದುರುಪಯೋಗ ಪಡೆಸಿಕೊಂಡಿರುವುದನ್ನು ನೋಡಿದ್ದೇನೆ ಎಂದರು.


ಇದನ್ನೂ ಓದಿ: ಸಂಸದರು ಶಾಸಕರ ಜೊತೆ ಡಿಸಿಎಂ‌ ಡಿಕೆ ಸುದೀರ್ಘ ಚರ್ಚೆ..!


ಎಸ್ ಆರ್ ಬೊಮ್ಮಾಯಿಯವರು ಎತ್ತರದ ಧ್ವನಿಯಲ್ಲಿ ಮಾತನಾಡಿದವರಲ್ಲ. ಅವರಂತೆಯೇ ಅವರ ಪುತ್ರ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದರು. ಪ್ರಜಾಪ್ರಭುತ್ವ ಎತ್ತ ಕಡೆ ಹೋಗುತ್ತಿದೆ ಎನ್ನುವುದನ್ನು ನೋಡಿದರೆ ಇತ್ತೀಚೆಗೆ ನಡೆದ ಚುನಾವಣೆ ಉದಾಹರಣೆ. ಹಣ ಎಷ್ಟು ಮಹತ್ವದ ಪಾತ್ರ ವಹಿಸಿದೆ ಎನ್ನುವುದನ್ನು ನೋಡಿದರೆ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎನ್ನುವ ಆತಂಕ ಮೂಡಿದೆ. ಹಣದ ಹೊಳೆ ತಡೆಯದಿದ್ದರೆ ಪ್ರಜಾಪ್ರಭುತ್ವ ಗಂಡಾಂತರಕ್ಕೆ ಹೋಗುತ್ತದೆ ಎನ್ನುವ ಆತಂಕ ಇದೆ. ಇದರ ಬಗ್ಗೆ ನಾಡಿನ ಹಿತ ಚಿಂತಕರು ಗಂಭೀರವಾಗಿ ಆಲೋಚಿಸಬೇಕಿದೆ ಎಂದರು.


ದೇಶದಲ್ಲಿ ಚುನಾವಣಾ ಆಯೊಗ ಇದೆ ಎನ್ನುವುದು ಬಹುತೇಕರಿಗೆ ಗೊತ್ತಿಲ್ಲ.ಟಿ.ಎನ್. ಶೇಷನ್ ಅವರು ಇದ್ದಾಗ ಮಾತ್ರ ಚುನಾವಣಾ ಆಯೊಗ ಸೂಕ್ತ ಕಾರ್ಯ ನಿರ್ವಹಿಸಿತ್ತು. ಆ ನಂತರ ಚುನಾವಣಾ ಆಯೋಗ ತನ್ನ ಪಾತ್ರ ನಿರ್ವಹಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


ಚುನಾವಣೆಯಲ್ಲಿ ಹಣದ ಪ್ರಭಾವ ಹೆಚ್ಚಾಗುತ್ತಿದೆ : ಆರ್. ವಿ. ದೇಶಪಾಂಡೆ


ಈಗಿನ ಚುನಾವಣೆಯಲ್ಲಿ ಹಣದ ಪ್ರಭಾವ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸುವ ಕೆಲಸ ಮಾಡಬೇಕಿದೆ. ನಾವು ದಾರಿ ತಪ್ಪುತ್ತಿದ್ದೇವೆ. ಅದಕ್ಕೆ ನಿಯಂತ್ರಣ ಹಾಕಬೇಕಿದೆ ಎಂದು ಮಾಜಿ ಸಚಿವ ಆರ್. ವಿ. ದೇಶಪಾಂಡೆ ಹೇಳಿದರು. 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾವು ರಾಜಕೀಯ ವಾಗಿ ಬೆಳೆದಿದ್ದರೆ ರಾಮಕೃಷ್ಣ ಹೆಗಡೆ, ದೇವೇಗೌಡರು ಮತ್ತು ಬೊಮ್ಮಾಯಿಯವರು ಕಾರಣ. ನಾನು, ಸಿಂದ್ಯಾ, ಜೀವರಾಜ ಎಲ್ಲರೂ ಯುವಕರು.  ಎಸ್. ಆರ್. ಬೊಮ್ಮಾಯಿಯವರಲ್ಲಿ ಶಿಸ್ತು ಇತ್ತು. ನಾವು ಈ ಮಟ್ಟಕ್ಕೆ ಬರಲು ಇವರೆಲ್ಲರೂ ಕಾರಣರು ಎಂದರು.ರಾಮಕೃಷ್ಣ ಹೆಗಡೆ ಅವರು ಸಿಎಂ ಆಗಿದ್ದಾಗ 16 ಜನ ಸಚಿವರನ್ನು ಕೈ ಬಿಟ್ಟರು. ಬೊಮ್ಮಾಯಿಯವರಿಗೆ ನನ್ನ ಮೇಲೆ ಬಹಳ ಪ್ರೀತಿ ಅವರ ಬಳಿ ಹೋಗಿ ಕೇಳಿದೆ. ಅವರು ರಾಮಕೃಷ್ಣ ಹೆಗಡೆ ಅವರ ಬಳಿ ಕಳಿಸಿದರು. ಅವರ ಬಳಿ ಹೋಗಿ ಕೇಳಿದಾಗ ಜಿಲ್ಲಾ ಪಂಚಾಯತಿ ಚುನಾವಣೆ ಗೆದ್ದು ಬನ್ನಿ ಆಗ ಪ್ರಶ್ನೆ ಕೇಳಿ ಅಂದರು, ನಾವು ಚುನಾವಣೆ ಗೆದ್ದು ಬಂದೆವು ನಮಗೆ ಸಂಪುಟ ಸಚಿವರನ್ನಾಗಿ ಮಾಡಿದರು. ಆಗ ಸಂಪುಟದಲ್ಲಿ ಸಚಿವರಾಗುವುದು ಬಹಳ ಕಷ್ಟ ಇತ್ತು ಎಂದು ಹಳೆಯ ದಿನಗಳನ್ನು ನೆನೆದರು. ಎಸ್. ಆರ್. ಬೊಮ್ಮಾಯಿಯವರು ಒಳ್ಳೆಯ ಆಡಳಿತಗಾರರಾಗಿದ್ದರು. ಅವರ ಸರ್ಕಾರ ಪ್ರತಿಪಕ್ಷದಿಂದ ಹೋಗಿರಲಿಲ್ಲ. ಯಡಿಯೂರಪ್ಪ ಅವರ ಸಹಕಾರದಿಂದ ರಾಮಕೃಷ್ಣ ಹೆಗಡೆ ಅವರ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಅದನ್ನು ನೆನೆಯಬೇಕು ಎಂದರು.ನಾವು ಜನತಾ ಪಾರ್ಟಿ 1983 ರಲ್ಲಿ ಅಧಿಕಾರಕ್ಕೆ ಬರುತ್ತದೆ ಅಂತ ಭಾವಿಸಿರಲಿಲ್ಲ. ಬೊಮ್ಮಾಯಿಯವರು, ದೇವೇಗೌಡರು, ರಾಮಕೃಷ್ಣ ಹೆಗಡೆ ಅವರು ಸೇರಿ ಜನತಾ ಪಕ್ಷ ಸರ್ಕಾರ ಅಧಿಕಾರಕ್ಕೆ ತಂದರು. ಜನತಾ ಪರಿವಾರದ ನಾಯಕರ ಜಗಳ ಆಡದಿದ್ದರೆ ಈಗಲೂ ಜನತಾ ಪಕ್ಷ ಅಧಿಕಾರದಲ್ಲಿ ಇರುತ್ತಿತ್ತು ಎಂದು ಹೇಳಿದರು.  


ಇದನ್ನೂ ಓದಿ: ಬಿಜೆಪಿ ಜೊತೆ ಕೈಜೋಡಿಸದಿರುವ ಪಕ್ಷ ಯಾವುದಿದೆ ಹೇಳಿ ? : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ


ಸುತ್ತೂರು ಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಎಸ್. ಆರ್.  ಬೊಮ್ಮಾಯಿಯವರು.ರಾಜಕೀಯದಲ್ಲಿ ಸರಳತೆ, ಸೌಜನ್ಯತೆ ಉಳಿಸಿಕೊಂಡಿದ್ದರು  ಅವರು ಎಂ ಎನ್ ರಾಯ್ ಅವರ ಭಾಷಣದಿಂದ ಪ್ರೇರಣೆಯಾದವರು. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು, ಜಯಪ್ರಕಾಶ್ ನಾರಾಯಣ ಹೋರಾಟದಿಂದ ಪ್ರಭಾವಿತರಾಗಿ ರಾಜಕೀಯ ಪ್ರವೇಶ ಮಾಡಿದವರು. ರಾಜಕೀಯ ಕ್ಷೇತ್ರದಲ್ಲಿ ಸಂವಿಧಾನದ ಮುಖ್ಯಸ್ಥರಾದವರು ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ತೋರಿಸಿಕೊಟ್ಟವರು ಎಸ್. ಆರ್. ಬೊಮ್ಮಾಯಿಯವರು. ಅವರು ಸ್ವತಃ ವಕೀಲರಾಗಿದ್ದರಿಂದ ರಾಜ್ಯಪಾಲರಾದವರು ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ತೋರಿಸಿಕೊಟ್ಟವರು ಎಸ್. ಆರ್. ಬೊಮ್ಮಾಯಿ.  ಪಕ್ಷದ ಒಳಗಿನ ಸಂಘರ್ಷವನ್ನು ಸಮನ್ವಯತೆಯಿಂದ ನಡೆಸಿಕೊಂಡು ಹೋದವರು ಎಸ್. ಆರ್.ಬೊಮ್ಮಾಯಿಯವರು. ಅವರು ಸಿಎಂ ಆಗಿ, ಕೇಂದ್ರದ ಸಚಿವರಾಗಿ ಕೆಲಸ ಮಾಡಿದವರು. ವೀರೇಂದ್ರ ಪಾಟೀಲರು ಚುನಾವಣೆಯಲ್ಲಿ ನಿಂತು ಸೋತಾಗ ಅವರ ಪರವಾಗಿ ನಿಂತವರು. ರಾಜಕೀಯದಲ್ಲಿ ಇದ್ದರೂ ಉತ್ತಮ ಜೀವನ ನಡೆಸಿದವರು ಬೊಮ್ಮಾಯಿ. ಪ್ರಜಾಪ್ರಭುತ್ವ ಹಣದ ಮುಂದೆ ದಾರಿ ತಪ್ಪುತ್ತಿದೆ ಎನ್ನುವ ಚರ್ಚೆ ನಡೆಯುತ್ತಿದೆ‌ ಇದನ್ನು ದಾರಿಗೆ ತರುವವರು ಯಾರು ಎನ್ನುವ ಪ್ರಶ್ನೆ ಇದೆ‌. ಪ್ರಜಾಪ್ರಭುತ್ವ ವನ್ನು ದಾರಿಗೆ ತರುವ ಕೆಲಸ ಮತದಾರರ ಮೇಲೆ ಇದೆ. 


ಮತದಾರರು ರಾಜಕಾರಣಿಗಳ ಮೇಲೆ ಹಾಕುತ್ತಾರೆ. ರಾಜಕಾರಣಿಗಳು ಮತದಾರರ ಮೇಲೆ ಹಾಕುತ್ತಾರೆ. ಚುನಾವಣೆಯಲ್ಲಿ ಯಾವ ಬಣ್ಣದ ನೋಟು ಬರುತ್ತದೆ ಎಂದು ಕೇಳುವ ಪರಿಸ್ಥಿತಿ ಇದೆ. ಯಾರಿಂದ ಹಣ ಪಡೆದಿದ್ದಾರೆ ಅವರಿಗೆ ಮತ ಹಾಕಬೇಕೆಂಬ ನೈತಿಕತೆಯೂ ಇಲ್ಲದಂತಾಗಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ   ಪಿಜಿಆರ್ ಸಿಂಧ್ಯಾ, ಬಿ.ಎಲ್. ಶಂಕರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಹೇಶ ಬೊಮ್ಮಾಯಿ, ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ.‌ಸೋಮಶೇಖರ ಹಾಜರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.