ಬೆಂಗಳೂರು: ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಸಚಿವ ಮುರುಗೇಶ ನಿರಾಣಿ ಸಹೋದರ ಸಂಗಮೇಶ ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಅವರು, ತಮ್ಮ ಸಹೋದರ ಮುರುಗೇಶ್ ನಿರಾಣಿ ವಿರುದ್ಧ ಮಾತನಾಡಿದ್ದ ಬಸವನಗೌಡ ಪಾಟೀಲ ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ. ಬಾಯಿ ಹರುಕನಂತೆ ಮಾತನಾಡುವ ನಾಮರ್ಧ ನಿನ್ನದೇ ಭಾಷೆಯಲ್ಲಿಯೇ ಉತ್ತರ ನೀಡುತ್ತೇನೆ. ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ’ ಎಂದು ಸಂಗಮೇಶ್ ನಿರಾಣಿ ಕಿಡಿಕಾರಿದ್ದಾರೆ.


ಇದೇ ಕೊನೆ ಚುನಾವಣೆ ಎಂದು ಎಷ್ಟು ಬಾರಿ ನುಡಿದಿರಿ, ಎಷ್ಟು ಬಾರಿ ತಪ್ಪಿದಿರಿ?: ಸಿದ್ದುಗೆ ಸುನೀಲ್ ಕುಮಾರ್ ಪ್ರಶ್ನೆ


‘ನೇರ ಕಾದಾಟಕ್ಕೆ ಕಣಕ್ಕೆ ಬಂದರೆ ನಿನ್ನ ತಾಕತ್ತು ತಿಳಿಯುತ್ತದೆ. ರಾಜಕೀಯ ಮರುಜನ್ಮ ಕೊಟ್ಟವರಿಗೆ ರಾಜಕೀಯ ಮರಣ ಶಾಸನ ಬರೆಯುವುದು ಗೊತ್ತಿದೆ. ಲಕ್ಷಾಂತರ ಜನರಿಗೆ ಅನ್ನ, ಆಶ್ರಯ, ಜೀವನ ಕೊಟ್ಟ ಧರ್ಮಾತ್ಮ ಮುರುಗೇಶ ನಿರಾಣಿಯವರ ತೇಜೋವಧೆಗೆ ನಿಂತ ಮುಠ್ಠಾಳರಿಗೆ ಕಾಲವೇ ಉತ್ತರ ನೀಡುತ್ತದೆ. ಮುರುಗೇಶ ನಿರಾಣಿ ಎಂಬ ಪ್ರಖರ ಸೂರ್ಯನೆದರು ನಿಂತವರು ಭಸ್ಮವಾಗಿದ್ದಾರೆ ನೆನಪಿರಲಿ’ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.  


ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದ್ದ ಮುರುಗೇಶ ನಿರಾಣಿ ಕಠಿಣ ಪದಗಳಿಂದ ತಿರುಗೇಟು ನೀಡಿದ್ದರು.   


ಇದನ್ನೂ ಓದಿ: ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು-ಕಾಂಗ್ರೆಸ್ ಘೋಷಣೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.