ಸಂತೋಷ್ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಅಗ್ರಹ

ಸಂತೋಷ್ ಆತ್ಮಹತ್ಯೆ ಪ್ರಕರಣ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಕಪ್ಪುಚುಕ್ಕೆ- ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

Written by - Prashobh Devanahalli | Edited by - Yashaswini V | Last Updated : Apr 13, 2022, 12:54 PM IST
  • ಗುತ್ತಿಗೆದಾರರು ಪತ್ರ ಬರೆದರೂ ಪ್ರಧಾನಿ ಏನೂ ಕ್ರಮ ಕೈಗೊಂಡಿಲ್ಲ.
  • ಇಷ್ಟೊಂದು ಭ್ರಷ್ಟ ಸರ್ಕಾರ ಯಾವತ್ತೂ ಬಂದಿಲ್ಲ.‌
  • ಸಂತೋಷ್ ತಮ್ಮ ಹೇಳಿಕೆಯಲ್ಲಿ ಈಶ್ವರಪ್ಪ ಅವರೇ ತಮ್ಮ ಸಾವಿಗೆ ಕಾರಣ ಎಂದಿದ್ದಾರೆ. ಇದಕ್ಕಿಂತ ಬೇರೆ ಏನು ಸಾಕ್ಷಿ ಬೇಕು?- ಸಿದ್ದರಾಮಯ್ಯ
ಸಂತೋಷ್ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಅಗ್ರಹ  title=
Congress demanding for KS Eshwarappa arrest

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಬಂಧನ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಇಂದು ರಾಜಭವನಕ್ಕೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, "ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ, ಸಂತೋಷ್ ಪಾಟೀಲ್ ಗೆ ಬೆಳಗಾವಿಯಲ್ಲಿ ಹಳ್ಳಿ ರಸ್ತೆ ಮಾಡಲು ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದ್ದರು. ಮಿನಿಸ್ಟರ್ ಅವರೇ ಹೇಳಿದ್ದಾರೆಂದು ಕೆಲಸ ಮಾಡಿದ್ದಾರೆ. ಆದರೆ ವರ್ಕ್ ಆರ್ಡರ್ ಕೊಟ್ಟಿಲ್ಲ, ಸಾಲ ಮಾಡಿ ಕೆಲಸ ಮಾಡಿದ್ದಾರೆ. ಗುಣಮಟ್ಟದ ಕೆಲಸ ಮಾಡಿದ್ದಾರೆ. ಆದರೆ ವರ್ಕ್ ಆರ್ಡರ್ ಹಾಗೂ ಬಿಲ್ ಪಾಸ್ ಮಾಡಲು ಸಚಿವ ಈಶ್ವರಪ್ಪ ಹಾಗೂ ಅವರ ಪಿಎಗಳು 40% ಕಮಿಷನ್ ಗಾಗಿ  ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪ ಮಾಡಿದರು.

ಗುತ್ತಿಗೆದಾರರು ಪತ್ರ ಬರೆದರೂ ಪ್ರಧಾನಿ ಏನೂ ಕ್ರಮ ಕೈಗೊಂಡಿಲ್ಲ. ಇಷ್ಟೊಂದು ಭ್ರಷ್ಟ ಸರ್ಕಾರ ಯಾವತ್ತೂ ಬಂದಿಲ್ಲ.‌ ಸಿಎಂ ಭೇಟಿ ಮಾಡಲು ಸಂತೋಷ್ ಉಡುಪಿಗೆ ಹೋಗಿದ್ದರು. ಆದರೆ ಸಿಎಂ ಸಿಕ್ಕಿಲ್ಲ. ಸಂತೋಷ್ ತಮ್ಮ ಹೇಳಿಕೆಯಲ್ಲಿ ಈಶ್ವರಪ್ಪ ಅವರೇ ತಮ್ಮ ಸಾವಿಗೆ ಕಾರಣ ಎಂದಿದ್ದಾರೆ. ಇದಕ್ಕಿಂತ ಬೇರೆ ಏನು ಸಾಕ್ಷಿ ಬೇಕು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ- ಯಾರು ಏನೇ ಮಾತಾಡಿದ್ರೂ ಸರ್ಕಾರ ಜೀವ ತೆಗೆಯುತ್ತೆ- ಗುತ್ತಿಗೆದಾರರಿಗೆ ಉಳಿವಿಲ್ಲ!

ಸಂತೋಷ್ ಆತ್ಮಹತ್ಯೆ ಪ್ರಕರಣ: ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಿದ್ದರೆ ಇಂಥ ಘಟನೆ ಆಗುತ್ತಿರಲಿಲ್ಲ:
ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ 40% ಭ್ರಷ್ಟಾಚಾರ ಆರೋಪದ ಬಗ್ಗೆ ನಿಲುವಳಿ ಸೂಚನೆ ಕೊಟ್ಟರೆ ಸ್ಪೀಕರ್ ಅದನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಚರ್ಚೆ ಇಲ್ಲದೆ ತಿರಸ್ಕಾರ ಮಾಡಿದ್ದರು. ಬಹುಷಃ ಅಂದು ಚರ್ಚೆಗೆ ಅವಕಾಶ ಕೊಟ್ಟರೆ ಇಂತಹ ಘಟನೆ ಆಗಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.

ಸಂತೋಷ್ ಆತ್ಮಹತ್ಯೆ ಪ್ರಕರಣ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಕಪ್ಪುಚುಕ್ಕೆ. ಕರ್ನಾಟಕದಲ್ಲಿ ಹತ್ತಾರು ವರ್ಷಗಳಿಂದ ಉತ್ತಮ ಆಡಳಿತ ನೀಡುತ್ತಾ ಬಂದಿದ್ದೆವು. ಮೊದಲಿಗೆ ಗುತ್ತಿಗೆದಾರರ ಸಂಘದವರು 40% ಕಮಿಷನ್ ಬಗ್ಗೆ ತಮ್ಮ ನೋವನ್ನು ಹೊರಹಾಕಿದ್ದರು, ಅದಕ್ಕೆ ಸಾಕ್ಷಿಯಾಗಿ ಓರ್ವ ಸಚಿವರ ಮೇಲೆ ನೇರವಾಗಿ ಹಿಂದೂ ವಾಹಿನಿ ಕಾರ್ಯಕರ್ತ ಕೇಂದ್ರ ಸಚಿವರಿಗೆ ಪತ್ರ ಬರೆದು, ಸಿಎಂಗೂ ತಿಳಿಸಿ ಕೊನೆಗೆ ರಾಜ್ಯದ ಭ್ರಷ್ಟಾಚಾರದ ವಿರುದ್ಧ  ಪ್ರಾಣವನ್ನು ನೀಡಿದ್ದಾರೆ ಎಂದರು. 

ಇದನ್ನೂ ಓದಿ- ಸಾಕ್ಷಿ ನಾಶ ತಡೆಯಲು ಶೀಘ್ರವೇ ಈಶ್ವರಪ್ಪ ಬಂಧನ ಅಗತ್ಯ: ಪೊಲೀಸರಿಗೆ AAP ದೂರು

ಸಂತೋಷ್ ತಮಗಾದ ನೋವನ್ನು ತಡೆದುಕೊಳ್ಳಲಾಗದೆ ಸಚಿವರ ಹೆಸರು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಎಫ್ ಐ ಆರ್ ಆಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕೂಡಲೇ ಬಂಧನ ಮಾಡಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News