Schools Reopening : ನಾಳೆ ಶಾಲೆಗಳು ಪುನರಾರಂಭ ಪೋಷಕರಲ್ಲಿ ಮನವಿ ಮಾಡಿಕೊಂಡ ಸಿಎಂ ಬೊಮ್ಮಾಯಿ 

ಈ ತಿಂಗಳ ಆರಂಭದಲ್ಲಿ, ರಾಜ್ಯ ಸರ್ಕಾರವು ಆಗಸ್ಟ್ 23 ರಿಂದ ಪರ್ಯಾಯ ಬ್ಯಾಚ್‌ಗಳಲ್ಲಿ 9 ರಿಂದ 12 ನೇ ತರಗತಿಯವರೆಗೆ (II ಪಿಯುಸಿ) ವಿದ್ಯಾರ್ಥಿಗಳಿಗೆ ಶಾಲೆಗಳನ್ನು ತೆರೆಯಲು ನಿರ್ಧರಿಸಿತು.

Written by - Channabasava A Kashinakunti | Last Updated : Aug 22, 2021, 10:51 AM IST
  • ಸೋಮವಾರದಿಂದ ರಾಜ್ಯದಲ್ಲಿ ಶಾಲೆಗಳು ಭಾಗಶಃ ಪುನರಾರಂಭ
  • ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮತ್ತೆ ತೆರೆಯಲು ರಾಜ್ಯ ಸರ್ಕಾರ ನಿರ್ದೇಶನ
  • ಮಕ್ಕಳು ಯಾವುದೇ ಭಯವಿಲ್ಲದೆ ತರಗತಿಗಳಿಗೆ ಹಾಜರಾಗಬಹುದೇ
Schools Reopening : ನಾಳೆ ಶಾಲೆಗಳು ಪುನರಾರಂಭ ಪೋಷಕರಲ್ಲಿ ಮನವಿ ಮಾಡಿಕೊಂಡ ಸಿಎಂ ಬೊಮ್ಮಾಯಿ  title=

ಬೆಂಗಳೂರು : ಆಗಸ್ಟ್ 23 ರ ಅಂದರೆ ಸೋಮವಾರದಿಂದ ರಾಜ್ಯದಲ್ಲಿ ಶಾಲೆಗಳು ಭಾಗಶಃ ಪುನರಾರಂಭಗೊಳ್ಳುತ್ತಿರುವುದರಿಂದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೋಷಕರಿಗೆ ಭರವಸೆ ನೀಡಿದ್ದು, ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ತರಗತಿಯ ಕಲಿಕೆಯನ್ನು ಖಚಿತಪಡಿಸಿಕೊಳ್ಳಲು "ತೀವ್ರ ಕಾಳಜಿ ವಹಿಸಿದೆ. ಮಕ್ಕಳನ್ನು ಶಾಲೆಗೆ ಬರುವಂತೆ ಪ್ರೋತ್ಸಾಹಿಸುವ ಸಲುವಾಗಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಕಾಳಜಿ ವಹಿಸಿದೆ ಎಂದು ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ(Basavaraj Bommai), ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮತ್ತೆ ತೆರೆಯಲು ರಾಜ್ಯ ಸರ್ಕಾರ ನಿರ್ದೇಶನಗಳನ್ನು ನೀಡಿದೆ. ಸೋಮವಾರದಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ.

ಇದನ್ನೂ ಓದಿ : KSP Recruitment 2021: ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ

ನಂತರ ಈ ಕುರಿತು ಪ್ರತಿಕ್ರಿಯಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿಸಿ ನಾಗೇಶ್(BC Nagesh), ಎಲ್ಲವೂ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ನಾನು ಬೆಂಗಳೂರಿನ ಶಾಲೆಗಳಿಗೆ ಭೇಟಿ ನೀಡುತ್ತೇನೆ. ವಿದ್ಯಾರ್ಥಿಗಳು ಕಲಿಕೆಯ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು, ಇದು ಕೊರೋನಾದಿಂದ  ಇಷ್ಟು ದಿನ ಅಡಚಣೆಯಾಗಿತ್ತು. ಇದರಿಂದ ಶಾಲೆಯಿಂದ ಮರಳಿದ ನಂತರ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲು ಮತ್ತು ತಮ್ಮ ಮಕ್ಕಳನ್ನು ಮೇಲ್ವಿಚಾರಣೆ ಮಾಡಲು ಪೋಷಕರಿಗೆ ಹೇಳಿದ್ದಾರೆ. 

ಇದನ್ನೂ ಓದಿ : ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ಮಕ್ಕಳು ಯಾವುದೇ ಭಯವಿಲ್ಲದೆ ತರಗತಿಗಳಿಗೆ(Class) ಹಾಜರಾಗಬಹುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ  ಸಚಿವ ಬಿಸಿ ನಾಗೇಶ್, "ಖಂಡಿತವಾಗಿ, ಶಾಲೆಗಳನ್ನು ಮತ್ತೆ ತೆರೆಯುವುದರ ಹಿಂದೆ ನಮ್ಮ ಉದ್ದೇಶವೆಂದರೆ ಮಕ್ಕಳು ನಿಧಾನವಾಗಿ ಶಾಲೆಗೆ ಮರಳಿ ಕರೆತರುವುದಾಗಿದೆ, ಸುಮಾರು ಒಂದೂವರೆ ವರ್ಷದಿಂದ ಅವರು ಶಾಲೆಗೆ ಹೋಗಲಿಲ್ಲ. ಅವರು ಕ್ರಮೇಣ ಹಾಜರಾಗಲು ಆರಂಭಿಸಿದರು. "

ಇದನ್ನೂ ಓದಿ : Covid-19 : ಅಂತಾರಾಜ್ಯ ಪ್ರಯಾಣಿಕರಿಗೆ ಸ್ಪಾಟ್ ಅಲ್ಲೇ ಸಿಗಲಿದೆ 'ಕೋವಿಡ್-19 ನೆಗೆಟಿವ್ ಪ್ರಮಾಣಪತ್ರ'

ಈ ತಿಂಗಳ ಆರಂಭದಲ್ಲಿ, ರಾಜ್ಯ ಸರ್ಕಾರವು ಆಗಸ್ಟ್ 23 ರಿಂದ ಪರ್ಯಾಯ ಬ್ಯಾಚ್‌ಗಳಲ್ಲಿ 9 ರಿಂದ 12 ನೇ ತರಗತಿಯವರೆಗೆ (II ಪಿಯುಸಿ) ವಿದ್ಯಾರ್ಥಿಗಳಿಗೆ ಶಾಲೆಗಳನ್ನು ತೆರೆಯಲು ನಿರ್ಧರಿಸಿತು. ಕೋವಿಡ್ -19(Covid-19) ಪಾಸಿಟಿವಿಟಿ ದರವು ಶೇ 2 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಮತ್ತೆ ತೆರೆಯದಿರಲು ನಿರ್ಧರಿಸಿತು. ಪ್ರಾಥಮಿಕ ಶಾಲೆಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಆಗಸ್ಟ್ ಕೊನೆಯ ವಾರದವರೆಗೆ ಮುಂದೂಡಲಾಗಿದೆ. ಕೋವಿಡ್ 3ನೇ ಅಲೆಯಾ ಸೋಂಕು ಹರಡುವ ಸಾಧ್ಯತೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News