ಬೆಂಗಳೂರು: ಹಣಕಾಸು ಸಚಿವರು ಆಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು 2021 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಕೊರೋನಾ ಸಂಕಷ್ಟದ ನಡುವೆ ರಾಜ್ಯ ಬಜೆಟ್ ​ ನಲ್ಲಿ ಯಾವೆಲ್ಲ ಯೋಜನೆಗಳು ಘೋಷಣೆಯಾಗಲಿವೆ ಎಂಬ ಬಗ್ಗೆ ಜನರಿಗೆ ಸಾಕಷ್ಟು ಕೂತಹಲವಿದೆ.


COMMERCIAL BREAK
SCROLL TO CONTINUE READING

ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಬಿ.ಎಸ್. ಯಡಿಯೂರಪ್ಪ(BS Yediyurappa), ಅಶಕ್ತರು, ವೃದ್ಧರು,ವಿಧವೆಯರು ಮತ್ತು ವಿಶೇಷ ಚೇತನರಿಗೆ ಸರ್ಕಾರದ ದತ್ತಾಂಶ ಆಧರಿಸಿ ಪಿಂಚಣಿ ಸೌಲಭ್ಯ ನೀಡುವ ಮನೆ ಬಾಗಿಲಿಗೇ ಮಾಸಾಶನ ಅಭಿಯಾನಕ್ಕೆ ಚಾಲನೆ ನೀಡಲಾಗುವುವುದು ಎಂದು ತಿಳಿಸಿದ್ದಾರೆ.


Karnataka Budget 2021: ಬಜೆಟ್ ಎಷ್ಟು ದೊಡ್ಡದು ಗೊತ್ತಾ? ಇಲ್ಲಿದೆ ಬಿಎಸ್ ವೈ ಲೆಕ್ಕಾಚಾರ!


ಕರ್ನಾಟಕ ಸರ್ಕಾರಿ ವಿಮಾ ಇಲಾಖೆ(Insurance Department)ಯ ಎಲ್ಲ ವ್ಯವಹಾರಗಳ ಗಣಕೀಕರಣಕ್ಕೆ ಕ್ರಮ, ತ್ವರಿತವಾಗಿ ನಿಖರ ಭೂ-ದಾಖಲೆಗಳನ್ನು ಒದಗಿಸಲು ಗಣಕೀಕೃತ ಅಕಾರ ಬಂದ್ ಮಾಹಿತಿ ಮತ್ತು ಪರಣಿ ಮಾಹಿತಿಯನ್ನು ಸಂಯೋಜಿಸಲು ಕ್ರಮ ಕೈಗೊಳ್ಳಲಲಾಗುವುದು ಎಂದು ಹೇಳಿದರು.


Karnataka Budget 2021 : ಕರೋನಾ ಕಾಲದಲ್ಲಿ ಕೈಹಿಡಿದ ಕೃಷಿಕ..! ಉದ್ಯಮಕ್ಕೆ ಶೇ. 5.1 ರಷ್ಟು ನಷ್ಟ


25 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣಾ ಜನ ವಸತಿ ಪ್ರದೇಶಗಳಿಗೆ ಹಕ್ಕು ದಾಖಲೆ(Documents)ಗಳನ್ನು ವಿತರಿಸುವ ಸ್ವಾಮಿತ್ವ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದರು.


Karnataka Budget 2021: ರೈತ ನಾಯಕ ಎಂದು ಹೇಳಿಕೊಳ್ಳುವ ಯಡಿಯೂರಪ್ಪ ಬಜೆಟ್‌ನಲ್ಲಿ ರೈತರಿಗೆ ಕೊಟ್ಟಿದ್ದೇನು?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.