ನವದೆಹಲಿ: ಒಂದೆಡೆಗೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಪ್ರತಿಭಟನೆ ಕಾವು ಜೋರಾಗಿದ್ದರೆ, ಇನ್ನೊಂದೆಡೆಗೆ ಮಾಜಿ ಪ್ರಧಾನಿ ದೇವೇಗೌಡ ತಮ್ಮ ಜೀವಿತಾವಧಿಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ದೆಹಲಿಯಲ್ಲಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ದೇವೇಗೌಡ" ಉತ್ತರ ಕರ್ನಾಟಕದ ಜನರು  ಬಿಜೆಪಿಯ ಪ್ರಚೋದನೆಗೆ ಬೀಳಬಾರದು ಈ ಬೇಡಿಕೆ  ತಮ್ಮ ಅಥವಾ ಕುಮಾರಸ್ವಾಮಿ ಕಾಲಾವಧಿಯಲ್ಲಿ ಸಾಧ್ಯವಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.


ದೇವೇಗೌಡರ ಈ ಹೇಳಿಕೆಯು ಪ್ರಮುಖವಾಗಿ ಉತ್ತರ ಕರ್ನಾಟಕ  ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯು ಪ್ರತ್ಯೇಕ ರಾಜ್ಯಕಾಗಿ ನೀಡಿರುವ ಬಂದ್ ವೇಳೆಯಲ್ಲಿ ಬಂದಿದೆ.ಬಿಜೆಪಿ ನಾಯಕ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ದೇವೇಗೌಡ "ಉತ್ತರ ಕರ್ನಾಟಕ  ಬಜೆಟ್ ಹಂಚಿಕೆಯಲ್ಲಿ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಆದರೆ ಯಡಿಯೂರಪ್ಪನವರು ದುರುದ್ದೇಶದಿಂದ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ" ಎಂದು ತಿಳಿಸಿದರು.