ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನ ಹಳೇ ಮೈಸೂರು ವಿಭಾಗದಲ್ಲಿ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು(ಮಾರ್ಚ್ 30) ಅಂಬಾವಿಲಾಸ ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರ ಜೊತೆ ಮಾತುಕತೆ ನಡೆಸಿದರು.


COMMERCIAL BREAK
SCROLL TO CONTINUE READING

ಇದೇ ಮೊದಲ ಬಾರಿಗೆ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ಅವರನ್ನು ಹೂಗುಚ್ಛ ನೀಡುವ ಮೂಲಕ ಅರಮನೆ ಸಿಬ್ಬಂದಿ ಸ್ವಾಗತಿಸಿದರು. 



ಅರಮನೆಯ ಖಾಸಗಿ ನಿವಾಸದಲ್ಲಿ ರಾಜವಂಶಸ್ಥರಾದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಯದುವೀರ್ ಕೃಷ್ಣರಾಜ ಒಡೆಯರ್ ಜೊತೆ ಷಾ ಮಾತುಕತೆ ನಡೆಸುತ್ತಿರುವ ದೃಶ್ಯ.



ಯುವರಾಜ ಅದ್ಯವೀರ್ ನರಸಿಂಹ ಒಡೆಯರ್ ನೊಂದಿಗೆ ಅಮಿತ್ ಶಾ



ಶಾ ಗೆ ಸಾಥ್ ನೀಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ



ಇಂದು ಬೆಳಿಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಅಮಿತ್ ಶಾ(ಎಲ್ಲಾ ಫೋಟೋಗಳನ್ನು ಟ್ವಿಟ್ಟರ್@AmitShah ದಿಂದ ತೆಗೆದುಕೊಳ್ಳಲಾಗಿದೆ)