ಸಾರ್ವಜನಿಕವಾಗಿಯೇ ವ್ಯಕ್ತಿ ಮೇಲೆ ಪೊಲೀಸರಿಂದ ಹಲ್ಲೆ! ಮನನೊಂದು ಆತ್ಮಹತ್ಯೆಗೆ ಶರಣಾದನೇ ಬಡಪಾಯಿ?

ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಹೋಬಳಿಯ ಗ್ರಾಮವೊಂದರ ನಿವಾಸಿ ಮಂಜುನಾಥ್​. ಜೂನ್ 15ರಂದು ಮನೆಯ ಹಾಲ್​ನಲ್ಲಿದ್ದ ಅಡಿಕೆ ದಬ್ಬೆಗೆ ಸೀರೆ ಕಟ್ಟಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅವರ ಪತ್ನಿ ದೂರು ನೀಡಿದ್ದು ಪೊಲೀಸ್ ಸಿಬ್ಬಂದಿ ನಡೆಸಿದ ಹಲ್ಲೆಯ ಕಾರಣಕ್ಕೆ ಮನನೊಂದು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

Written by - Bhavishya Shetty | Last Updated : Jun 17, 2023, 10:39 AM IST
    • ಶಿವಮೊಗ್ಗ ಪೊಲೀಸರ ಹಲ್ಲೆಯಿಂದಾಗಿ ಓರ್ವ ವ್ಯಕ್ತಿ ಜೀವ ಕಳೆದುಕೊಂಡನೇ?
    • ಸದ್ಯ ಈ ಪ್ರಶ್ನೆಯೊಂದನ್ನ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ನಲ್ಲಿ ಸಲ್ಲಿಕೆಯಾಗಿರುವ ದೂರು ಕೇಳುತ್ತಿದೆ.
    • ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಸಿಬ್ಬಂದಿ ಸಾರ್ವಜನಿಕ ಸ್ಥಳದಲ್ಲಿಯೇ ಥಳಿಸಿದ್ದಾರೆ ಎನ್ನಲಾಗಿದೆ.
ಸಾರ್ವಜನಿಕವಾಗಿಯೇ ವ್ಯಕ್ತಿ ಮೇಲೆ ಪೊಲೀಸರಿಂದ ಹಲ್ಲೆ! ಮನನೊಂದು ಆತ್ಮಹತ್ಯೆಗೆ ಶರಣಾದನೇ ಬಡಪಾಯಿ? title=
Shimoga

ಶಿವಮೊಗ್ಗ ಪೊಲೀಸರ ಹಲ್ಲೆಯಿಂದಾಗಿ ಓರ್ವ ವ್ಯಕ್ತಿ ಜೀವ ಕಳೆದುಕೊಂಡನೇ? ಸದ್ಯ ಈ ಪ್ರಶ್ನೆಯೊಂದನ್ನ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ನಲ್ಲಿ ಸಲ್ಲಿಕೆಯಾಗಿರುವ ದೂರು ಕೇಳುತ್ತಿದೆ. ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಸಿಬ್ಬಂದಿ ಸಾರ್ವಜನಿಕ ಸ್ಥಳದಲ್ಲಿಯೇ ಥಳಿಸಿದ್ದಾರೆ ಎನ್ನಲಾಗಿದೆ. ಅದೇ ಘಟನೆಯಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ಧಾನೆ. ಈ ಸಂಬಂಧ ಮೃತನ ಪತ್ನಿ ದೂರು ನೀಡಿದ್ದು, ಶಿವಮೊಗ್ಗ ಎಸ್​ ಪಿ ಮಿಥುನ್ ಕುಮಾರ್ ಪ್ರಕರಣವನ್ನು ಯಾವ ರೀತಿಯಲ್ಲಿ ನಿರ್ವಹಿಸುತ್ತಾರೆ ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ.

ಇದನ್ನೂ ಓದಿ:  "ಐಪಿಎಲ್ ನಿಂದ ಅಂತರಾಷ್ಟ್ರೀಯ ಪಂದ್ಯಗಳಿಗೆ ತೊಂದರೆಯಿಲ್ಲ!."

ಏನಿದು ಪ್ರಕರಣ?

ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಹೋಬಳಿಯ ಗ್ರಾಮವೊಂದರ ನಿವಾಸಿ ಮಂಜುನಾಥ್​. ಜೂನ್ 15ರಂದು ಮನೆಯ ಹಾಲ್​ನಲ್ಲಿದ್ದ ಅಡಿಕೆ ದಬ್ಬೆಗೆ ಸೀರೆ ಕಟ್ಟಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅವರ ಪತ್ನಿ ದೂರು ನೀಡಿದ್ದು ಪೊಲೀಸ್ ಸಿಬ್ಬಂದಿ ನಡೆಸಿದ ಹಲ್ಲೆಯ ಕಾರಣಕ್ಕೆ ಮನನೊಂದು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ತಮಗೆ ನ್ಯಾಯ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಏನಿದು ಹಲ್ಲೆ ಪ್ರಕರಣ?

ಜೂನ್ 11 ರಂದು ಮಂಜುನಾಥ್ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಎದುರು ನಿಂತಿದ್ದರಂತೆ. ಆ ಸಂದರ್ಭದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ, ಮಂಜುನಾಥ್​ ರನ್ನ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಯಾವ ಕಾರಣಕ್ಕೆ ಥಳಿಸಿದ್ದರು ಎಂಬುದು ತಿಳಿದುಬಂದಿಲ್ಲ. ಆದರೆ ಕೈ, ಕಾಲು, ಕಪಾಳ, ಬೆನ್ನಿಗೆ ಥಳಿಸಿದ ಸಿಬ್ಬಂದಿ ಆನಂತರ ಮಂಜುನಾಥ್​ ನನ್ನ ಸ್ಟೇಷನ್​ ಗೆ ಕರೆದೊಯ್ದಿದ್ದಾರೆ. ಸಂಜೆ ಹೊತ್ತಿಗೆ ಆತನನ್ನ ಸಹೋದರ ಬಿಡಿಸಿಕೊಂಡು ಮನೆಗೆ ಬಂದಿದ್ದಾರೆ. ಆದರೆ ಈ ಘಟನೆ ನಂತರ ಮಂಜುನಾಥ್​ ಖಿನ್ನತೆಗೆ ಜಾರಿದ್ದರಂತೆ. ಯಾರೊಂದಿಗೂ ಮಾತನಾಡದೇ ಮೌನಿಯಾಗಿದ್ದ ಮಂಜುನಾಥ್​ ಜೂನ್ 15 ರ ರಾತ್ರಿ ತನ್ನ ಪತ್ನಿಗೆ ಮನೆಮುಂದಿನ  ಕೋಣೆಯಲ್ಲಿ ಮಲಗಲು ತಿಳಿಸಿದ್ದಾನೆ. ಆನಂತರ ಹಾಲ್ ​ನಲ್ಲಿ ನೇಣುಬಿಗಿದುಕೊಂಡಿದ್ದಾನೆ. ಜೂನ್ 16 ರ ಬೆಳಗ್ಗೆ ಪತ್ನಿ ಕೋಣೆಯಿಂದ ಹೊರಬಂದಾಗ ವಿಚಾರ ಗೊತ್ತಾಗಿದೆ.

ಇದನ್ನೂ ಓದಿ: 37 ವರ್ಷದ ಈ ಆಟಗಾರನಿಗೆ ಏಷ್ಯಾಕಪ್ ಕೊನೆ ಪಂದ್ಯ: ಟೆಸ್ಟ್’ನಲ್ಲಿ 7 ಶತಕ ಬಾರಿಸಿದ ಡ್ಯಾಶಿಂಗ್ ಓಪನರ್ ನಿವೃತ್ತಿ ಪಕ್ಕಾ!

ಸದ್ಯ ಪ್ರಕರಣ ಸಂಬಂಧ ಹೊಳೆಹೊನ್ನೂರು ಇನ್​ಸ್ಪೆಕ್ಟರ್ ​ಗೆ ದೂರು ನೀಡಲಾಗಿದ್ದು, ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News