ಕೇಂದ್ರದ ಅಣತಿಯಂತೆ ರಾಜ್ಯಪಾಲರ ಕುಣಿತ : ಸಚಿವ ಶಿವರಾಜ್ ತಂಗಡಗಿ ಕಿಡಿ

ರಾಜ್ಯಪಾಲರಿಗೆ ಬೆಳಗ್ಗೆ 11:30ಕ್ಕೆ ದೂರು ನೀಡಿದರೆ ಸಂಜೆ 6 ಗಂಟೆ ವೇಳೆಗೆ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ಇದನ್ನು ನೋಡಿದರೆ ರಾಜಪಾಲರು  ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಹೇಳಿದಂತೆ ಕುಣಿಯುತ್ತಿರುವುದು ಗೊತ್ತಾಗುತ್ತಿದೆ ಎಂದು ಸಚಿವ ಶಿವರಾಜ್‌ ತಂಗಡಗಿ ಕಿಡಿಕಾರಿದರು.

Written by - Prashobh Devanahalli | Edited by - Krishna N K | Last Updated : Aug 3, 2024, 03:44 PM IST
    • ರಾಜ್ಯಪಾಲರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಕುಣಿಸಿದಂತೆ ಕುಣಿಯುತ್ತಿದ್ದಾರೆ.
    • ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ.
    • ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಕಿಡಿ.
ಕೇಂದ್ರದ ಅಣತಿಯಂತೆ ರಾಜ್ಯಪಾಲರ ಕುಣಿತ : ಸಚಿವ ಶಿವರಾಜ್ ತಂಗಡಗಿ ಕಿಡಿ title=

ಕೊಪ್ಪಳ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಕುಣಿಸಿದಂತೆ ಕುಣಿಯುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ದೂರಿದ್ದಾರೆ.

ಕೊಪ್ಪಳದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಟಿ.ಜೆ.ಅಬ್ರಹಾಂ ಓರ್ವ ಬ್ಲಾಕ್ ಮೇಲರ್. ಆತನ ವಿರುದ್ಧ ಸುಪ್ರೀಂ ಕೋರ್ಟ್ 20 ಲಕ್ಷ ದಂಡ ಹಾಕುವ ಮೂಲಕ ಛೀಮಾರಿ ಹಾಕಿ ಕಳುಹಿಸಿದೆ. ಅಂತಹ ವ್ಯಕ್ತಿ ರಾಜ್ಯಪಾಲರಿಗೆ ಬೆಳಗ್ಗೆ 11:30ಕ್ಕೆ ದೂರು ನೀಡಿದರೆ ಸಂಜೆ 6 ಗಂಟೆ ವೇಳೆಗೆ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ಇದನ್ನು ನೋಡಿದರೆ ರಾಜಪಾಲರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಹೇಳಿದಂತೆ ಕುಣಿಯುತ್ತಿರುವುದು ಗೊತ್ತಾಗುತ್ತಿದೆ. ರಾಜ್ಯಪಾಲರ ನಡೆಯನ್ನು ಕನ್ನಡಿಗರು, ಕರ್ನಾಟಕದ ಜನತೆ ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ಇದನ್ನೂ ಓದಿ:ನದಿಗೆ ಇಳಿಯುವವರಿಗೆ ಲಾಠಿ ಏಟು !ಪೊಲೀಸರಿಗೆ ಸಚಿವ ಕೃಷ್ಣಭೈರೇಗೌಡ ಸೂಚನೆ

ಮುಡಾದಲ್ಲಿ ಅವ್ಯವಾರವಾಗಿದೆ ಎಂಬ ವಿಚಾರ ಕೇಳಿ ಬಂದ ಕೂಡಲೇ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಂಗ ತನಿಖೆಗೆ ವಹಿಸಿದ್ದಾರೆ. ನ್ಯಾಯಾಂಗ ತನಿಖೆ ಆಗ್ತಾ ಇದೆ. ತನಿಖೆ ನಡೆದು ಬಿಜೆಪಿಗರ ಬಣ್ಣ ಬಯಲಾಗಲಿದೆ ಎಂದರು.

ಈ ಹಿಂದೆ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಮೂರ್ನಾಲ್ಕು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದರು. ಆ ಪ್ರಕರಣದ ತನಿಖೆ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ನಾವು ಸಿಬಿಐ, ಇಡಿ ಅಂತಹ ಯಾವುದೇ ತನಿಖಾ ಸಂಸ್ಥೆಗೆ ಎದುರುವ ಪ್ರಶ್ನೆಗೆ ಇಲ್ಲ ಎಂದು ಮಾಧ್ಯಮದವರ ಪ್ರಶ್ನೆವೊಂದಕ್ಕೆ ಪ್ರತಿಕ್ರಿಸಿದರು.

ಇದನ್ನೂ ಓದಿ: ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ: ಸಿಎಂಗೆ ಕೇಂದ್ರ ಸಚಿವ ಎಚ್‌ಡಿ‌ಕೆ

ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ 60.4 ಕೋಟಿ ಭ್ರಷ್ಟಾಚಾರ ನಡೆದಿದೆ. ಅದನ್ನು ಯಾವ ತನಿಖೆಗೆ ವಹಿಸಿದ್ದರು? ಯಾರನ್ನು ಬಂಧಿಸಿದ್ದಾರೆ? ಇನ್ನು ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ 47 ಕೋಟಿ ಅವ್ಯವಹಾರ ನಡೆದಿದೆ.  ಅಂದು ನಿಗಮದ ಅಧ್ಯಕ್ಷನಾಗಿದ್ದ ವೀರಯ್ಯನನ್ನು ನಾವು ಬಂದಿಸಿದ್ದೇವೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ ಅವರು ಏಕೆ ತುಟಿ ಬಿಚ್ಚುವುದಿಲ್ಲ.   ಮೂರು ಕೋಟಿ ಹಣ ನೇರವಾಗಿ ವೀರಯ್ಯನ ಖಾತೆಗೆ ಜಮೆಯಾಗಿದೆ. ಆ ಹಣದಲ್ಲಿ ವೀರಯ್ಯ ಅವರು ನಾಗರಬಾವಿ ಸಮೀಪ ಭವ್ಯ ಬಂಗಲೆ ನಿರ್ಮಾಣ ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಮಿತ್ರರು ರಾಜ್ಯದ ಜನತೆಗೆ ಉತ್ತರ ನೀಡಲಿ ಎಂದು ಆಗ್ರಹಿಸಿದರು.

ಇನ್ನು ಯಡಿಯೂರಪ್ಪ ಅವರ ಅವಧಿಯಲ್ಲಿ ಕರಕುಶಲ ಅಭಿವೃದ್ಧಿ ನಿಗಮದಲ್ಲಿ 22.40 ಕೋಟಿ ಹಣವನ್ನು ಖಾಸಗಿ ವ್ಯಕ್ತಿಗೆ ಖಾತೆಗೆ ಜಮೆ ಮಾಡಲಾಗಿದೆ. ಈ ಹಗರಣಗಳ ಬಗ್ಗೆ ಮಾತನಾಡದ ಬಿಜೆಪಿ ನಾಯಕರು ಯಾವ ಮುಖ ಇಟ್ಕೊಂಡು ಮೈಸೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೋ. ಬಿಜೆಪಿ ನಾಯಕರ ಬಣ್ಣವನ್ನು ಒಂದೊಂದಾಗಿ ಬಯಲು ಮಾಡುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News